‘ಜಮೀನಿನಿಂದ ವಾಪಸ್ ಆಗುವಾಗ ಅವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ಕಿ.ಮೀ.ವರೆಗೆ ಈಜಿಕೊಂಡು ಹೋಗಿ ಮರವೇರಿ ಕುಳಿತಿದ್ದಾರೆ. ಇದನ್ನು ನಂತರ ಗಮನಿಸಿದ ಸಾರ್ವಜನಿಕರು ತಹಶೀಲ್ದಾರ್ ಕಚೇರಿಗೆ ಕರೆ ಮಾಡಿ ತಿಳಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅವರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ’ ಎಂದು ತಹಶೀಲ್ದಾರ್ ರೇಷ್ಮಾ ತಾಳಿಕೋಟೆ ಮಾಹಿತಿ ನೀಡಿದರು.