ಧನ್ಯವಾದ ಸಲ್ಲಿಸಿದ ಸತೀಶ
‘ನನ್ನ ಗೆಲುವಿಗಾಗಿ ಶ್ರಮಿಸಿದ ಲೋಕಸಭಾ ಕ್ಷೇತ್ರದ ಎಲ್ಲ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಸೋಲು–ಗೆಲುವು ಸಹಜ. ಮತ್ತೆ ಇಂತಹ ಹಲವಾರು ಚುನಾವಣಾ ಸವಾಲುಗಳನ್ನು ನಾವು ಎದುರಿಸಬೇಕಾಗಿದೆ. ಹೀಗಾಗಿ, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಪರಾಜಿತ ಅಭ್ಯರ್ಥಿ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ.