<p><strong>ಬೆಳಗಾವಿ:</strong> ‘ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ, ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಈ ಮೇಳ ಆಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<p>ನಗರದ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 4 ದಿನಗಳ ಕಾಲ ನಡೆಯಲಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಮೇಳದಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಮಾರಾಟಕ್ಕಿವೆ. ಜಿಲ್ಲೆಯ ಎಲ್ಲ ಗ್ರಾಹಕರು ರೈತರಿಂದಲೇ ನೇರವಾಗಿ ಖರೀದಿಸಿ, ರುಚಿಕರ ಮಾವು ಸವಿಯಬೇಕು. ರೈತರನ್ನು ಪ್ರೋತ್ಸಾಹಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ‘ಇಂತಹ ಮೇಳಗಳು ರೈತರಲ್ಲಿ ಆತ್ಮ ವಿಶ್ವಾಸ ತುಂಬುತ್ತವೆ. ಮಾವು ಪ್ರದರ್ಶನ ಮಾತ್ರವಲ್ಲದೆ, ಪ್ರತಿ ಎರಡು ತಿಂಗಳಿಗೊಮ್ಮೆ ವಿವಿಧ ತೋಟಗಾರಿಕಾ ಬೆಳೆಗಳ ಮೇಳ ಆಯೋಜಿಸಿ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಮಳಿಗೆ ವೀಕ್ಷಿಸಿದ ಡಿಸಿ: ಪ್ರತಿ ಮಾವಿನ ಮಳಿಗೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ರೈತರನ್ನು ಹುರಿದುಂಬಿಸಿದರು. ಬೆಳಗಾವಿ, ಖಾನಾಪುರ, ಧಾರವಾಡ, ಚನ್ನಮ್ಮ ಕಿತ್ತೂರು ಹಾಗೂ ಮಹಾರಾಷ್ಟ್ರದಿಂದಲೂ ಬಂದಿರುವ ರೈತರು ತಾವು ಬೆಳೆದ ಮಾವಿನ ಹಣ್ಣಿನ ಬಗ್ಗೆ ಮಾಹಿತಿ ನೀಡಿದರು.</p>.<p>ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಸೋಮಶೇಖರ ಹುಳ್ಳೊಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ, ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಈ ಮೇಳ ಆಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<p>ನಗರದ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 4 ದಿನಗಳ ಕಾಲ ನಡೆಯಲಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಮೇಳದಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಮಾರಾಟಕ್ಕಿವೆ. ಜಿಲ್ಲೆಯ ಎಲ್ಲ ಗ್ರಾಹಕರು ರೈತರಿಂದಲೇ ನೇರವಾಗಿ ಖರೀದಿಸಿ, ರುಚಿಕರ ಮಾವು ಸವಿಯಬೇಕು. ರೈತರನ್ನು ಪ್ರೋತ್ಸಾಹಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ‘ಇಂತಹ ಮೇಳಗಳು ರೈತರಲ್ಲಿ ಆತ್ಮ ವಿಶ್ವಾಸ ತುಂಬುತ್ತವೆ. ಮಾವು ಪ್ರದರ್ಶನ ಮಾತ್ರವಲ್ಲದೆ, ಪ್ರತಿ ಎರಡು ತಿಂಗಳಿಗೊಮ್ಮೆ ವಿವಿಧ ತೋಟಗಾರಿಕಾ ಬೆಳೆಗಳ ಮೇಳ ಆಯೋಜಿಸಿ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಮಳಿಗೆ ವೀಕ್ಷಿಸಿದ ಡಿಸಿ: ಪ್ರತಿ ಮಾವಿನ ಮಳಿಗೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ರೈತರನ್ನು ಹುರಿದುಂಬಿಸಿದರು. ಬೆಳಗಾವಿ, ಖಾನಾಪುರ, ಧಾರವಾಡ, ಚನ್ನಮ್ಮ ಕಿತ್ತೂರು ಹಾಗೂ ಮಹಾರಾಷ್ಟ್ರದಿಂದಲೂ ಬಂದಿರುವ ರೈತರು ತಾವು ಬೆಳೆದ ಮಾವಿನ ಹಣ್ಣಿನ ಬಗ್ಗೆ ಮಾಹಿತಿ ನೀಡಿದರು.</p>.<p>ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಸೋಮಶೇಖರ ಹುಳ್ಳೊಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>