ಸಾನ್ನಿಧ್ಯ ವಹಿಸಿದ್ದ ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಾತನಾಡಿ, ‘ಇಂದಿನ ವಿಜ್ಞಾನದಲ್ಲಿ ನಡೆಯುತ್ತಿರುವ ಅನೇಕ ಅವಿಷ್ಕಾರಗಳು ಸಾವಿರಾರು ವರ್ಷಗಳ ಹಿಂದೆ ರಚಿತವಾದ ಪ್ರಾಕೃತ ಭಾಷೆಯ ಗ್ರಂಥಗಳಲ್ಲಿ ಉಲ್ಲೇಖಿತವಾಗಿದೆ. ಆದರೆ, ನಾವು ನಮ್ಮ ಸಂಸ್ಕೃತಿ, ಪಾರಂಪರಿಕ ಭಾಷೆ ಬಿಟ್ಟು ಆಧುನಿಕತೆ ಹೆಸರಿನಲ್ಲಿ ಪ್ರಾಶ್ಚಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಂಡೆವು. ಇನ್ನೂ ಕಾಲ ಮಿಂಚಿಲ್ಲ. ವಿಶ್ವವಿದ್ಯಾಲಯಗಳಲ್ಲಿರುವ ಪ್ರಾಕೃತ ಭಾಷೆಯ ಗ್ರಂಥಗಳ ಅಧ್ಯಯನ ಮತ್ತು ಸಂಶೋಧನೆ ನಡೆದರೆ ನಮ್ಮತನ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.