<p><strong>ಬೆಳಗಾವಿ</strong>: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಸಚಿವ ಸಂಪುಟದಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಿದ್ದೇನೆ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘2018ರ ಡಿಸೆಂಬರ್ ಬಳಿಕ ಇಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕೋರಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ’ ಎಂದರು.</p>.<p>‘ನಾನು, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಈ ಭಾಗದವರು. ಆದರೆ, ಹೀಗೆಯೇ ನಡೆಸಿ ಎಂದು ನಿರ್ದೇಶಿಸುವ ಅಧಿಕಾರ ನನಗಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ನಡೆಯಬಹುದು. ಇಲ್ಲಿ ನಡೆದರೆ ಬೆಳಗಾವಿಗೆ 600 ಅಧಿಕಾರಿಗಳು ಬರಬೇಕಾಗುತ್ತದೆ. ಕೋವಿಡ್ ಇದೆ ಎಂಬಿತ್ಯಾದಿ ಕಾರಣವನ್ನು ಅಧಿಕಾರಿಗಳು ಹೇಳಿದ್ದಾರೆ. ನೋಡೋಣ’ ಎಂದರು.</p>.<p>‘ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಸರ್ಕಾರದಿಂದಲೇ ಕನ್ನಡ ಧ್ವಜ ಹಾರಿಸಲು ಕ್ರಮ ಕೈಗೊಳ್ಳಬೇಕು. ಕರ್ನಾಟಕದ ಹಿತದ ಪ್ರಶ್ನೆ ಬಂದಾಗ ಜನಪ್ರತಿನಿಧಿಗಳೆಲ್ಲ ಒಂದಾಗಬೇಕು’ ಎಂದು ಹೇಳಿದರು.</p>.<p>‘ಮೇಕೆ ದಾಟು ಯೋಜನೆ ಸೇರದಿಂತೆ ನದಿ ನೀರು ಹಂಚಿಕೆ ವಿಚಾರವಿರಲಿ, ಗಡಿ ಸಮಸ್ಯೆ ಇರಲಿ ನಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರಬಾರದು. ಬೇರೆ ರಾಜ್ಯಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲದಿರುವುದನ್ನು 40 ವರ್ಷಗಳಿಂದಲೂ ನೋಡುತ್ತಿದ್ದೇನೆ. ರಾಜ್ಯಕ್ಕೆ ಅನ್ಯಾಯವಾದಾಗ ಸರಿಪಡಿಸಿಕೊಳ್ಳಲು ಒಗ್ಗಟ್ಟಾಗುವುದು ಎಲ್ಲರ ಕರ್ತವ್ಯವಾಗಿದೆ’ ಎಂದರು.</p>.<p>‘1ರಿಂದ 12ನೇ ತರಗತಿ ಮಕ್ಕಳ ಶಿಕ್ಷಣಕ್ಕೆ ಅಡೆತಡೆ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಕೋವಿಡ್ ವೇಳೆಯಲ್ಲಿ ಸುಮ್ಮನೆ ಪಾಸ್ ಮಾಡುವುದು ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಸಚಿವ ಸಂಪುಟದಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಿದ್ದೇನೆ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘2018ರ ಡಿಸೆಂಬರ್ ಬಳಿಕ ಇಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕೋರಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ’ ಎಂದರು.</p>.<p>‘ನಾನು, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಈ ಭಾಗದವರು. ಆದರೆ, ಹೀಗೆಯೇ ನಡೆಸಿ ಎಂದು ನಿರ್ದೇಶಿಸುವ ಅಧಿಕಾರ ನನಗಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ನಡೆಯಬಹುದು. ಇಲ್ಲಿ ನಡೆದರೆ ಬೆಳಗಾವಿಗೆ 600 ಅಧಿಕಾರಿಗಳು ಬರಬೇಕಾಗುತ್ತದೆ. ಕೋವಿಡ್ ಇದೆ ಎಂಬಿತ್ಯಾದಿ ಕಾರಣವನ್ನು ಅಧಿಕಾರಿಗಳು ಹೇಳಿದ್ದಾರೆ. ನೋಡೋಣ’ ಎಂದರು.</p>.<p>‘ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಸರ್ಕಾರದಿಂದಲೇ ಕನ್ನಡ ಧ್ವಜ ಹಾರಿಸಲು ಕ್ರಮ ಕೈಗೊಳ್ಳಬೇಕು. ಕರ್ನಾಟಕದ ಹಿತದ ಪ್ರಶ್ನೆ ಬಂದಾಗ ಜನಪ್ರತಿನಿಧಿಗಳೆಲ್ಲ ಒಂದಾಗಬೇಕು’ ಎಂದು ಹೇಳಿದರು.</p>.<p>‘ಮೇಕೆ ದಾಟು ಯೋಜನೆ ಸೇರದಿಂತೆ ನದಿ ನೀರು ಹಂಚಿಕೆ ವಿಚಾರವಿರಲಿ, ಗಡಿ ಸಮಸ್ಯೆ ಇರಲಿ ನಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರಬಾರದು. ಬೇರೆ ರಾಜ್ಯಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲದಿರುವುದನ್ನು 40 ವರ್ಷಗಳಿಂದಲೂ ನೋಡುತ್ತಿದ್ದೇನೆ. ರಾಜ್ಯಕ್ಕೆ ಅನ್ಯಾಯವಾದಾಗ ಸರಿಪಡಿಸಿಕೊಳ್ಳಲು ಒಗ್ಗಟ್ಟಾಗುವುದು ಎಲ್ಲರ ಕರ್ತವ್ಯವಾಗಿದೆ’ ಎಂದರು.</p>.<p>‘1ರಿಂದ 12ನೇ ತರಗತಿ ಮಕ್ಕಳ ಶಿಕ್ಷಣಕ್ಕೆ ಅಡೆತಡೆ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಕೋವಿಡ್ ವೇಳೆಯಲ್ಲಿ ಸುಮ್ಮನೆ ಪಾಸ್ ಮಾಡುವುದು ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>