‘ನಮ್ಮಲ್ಲಿ ಬೆಳೆಯಲಾಗುವ ಬಾಸುಮತಿ, ಸಾಯಿರಾಮ್, ಇಂದ್ರಾಯಿಣಿ ತಳಿಗಳ ಭತ್ತಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ಜೂನ್ನಲ್ಲಿ ಮೃಗಶಿರಾ ಮಳೆಯಾಗುತ್ತದೆಂದು ಪ್ರತಿ ಎಕರೆಗೆ ₹15 ಸಾವಿರದಿಂದ ₹20 ಸಾವಿರ ವ್ಯಯಿಸಿ ಬಿತ್ತನೆ ಮಾಡಿದ್ದೆವು. ಆದರೆ, ಭೂಮಿಯಲ್ಲೇ ಬೀಜ ಕಮರುತ್ತಿವೆ. ನಾಲ್ಕು ದಿನಗಳಲ್ಲಿ ಮಳೆಯಾಗದಿದ್ದರೆ, ಎರಡನೇ ಸಲ ಬಿತ್ತನೆ ಮಾಡುವ ಪರಿಸ್ಥಿತಿ ಸೃಷ್ಟಿಯಾಗಲಿದೆ’ ಎಂದು ರೈತ ರಾಜು ಮಾರ್ವೆ ‘ಪ್ರಜಾವಾಣಿ’ ಎದುರು ಅಳಲು ತೋಡಿಕೊಂಡರು.