ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್ ರಸ್ತೆಯ ಅಮರ್ ಹೋಟೆಲ್ ಎದುರು ಲಾರಿ ಮತ್ತು ಕಾರಿನನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತರನ್ನು ನಿಪ್ಪಾಣಿಯ ಸಾಯಿಶಂಕರ ನಗರದ ಅದಗೊಂಡ ಬಾಬು ಪಾಟೀಲ (60), ಛಾಯಾ ಅದಗೊಂಡ ಪಾಟೀಲ (55), ಮಹಾರಾಷ್ಟ್ರದ ರಾಧಾ ನಗರದ ಚಂಪಾತಾಯಿ ಬಾಳೆಷಾ ಮಗದುಮ್ಮ (85) ಮತ್ತು ಸದಲಗಾದ ಮಹೇಶ ದೇವಗೊಂಡ ಪಾಟೀಲ (28) ಎಂದು ಗುರುತಿಸಲಾಗಿದೆ ಎಂದು ನಿಪ್ಪಾಣಿ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದೆ.
ನಿಪ್ಪಾಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಜೆಸಿಬಿಯಿಂದ ಕಾರನ್ನು ತೆರವುಗೊಳಿಸಲಾಗಿದೆ. ಪ್ರಕರಣ ದಾಖಲಾಗಿದೆ.