ನಿವಾಸಿಗಳು, ಶ್ರೀನಗರ ಬಡಾವಣೆಯ ಸಮಸ್ಯೆಗಳನ್ನು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಗಮನಕ್ಕೂ ಇತ್ತೀಚೆಗೆ ತಂದಿದ್ದಾರೆ. ಗ್ರಾಮ ಪಂಚಾಯ್ತಿಗೂ ಹೊಸ ಆಡಳಿತ ಮಂಡಳಿ ಬಂದಿದೆ. ಅಲ್ಲಿ ರಸ್ತೆ ಮತ್ತು ಕಾಂಕ್ರೀಟ್ ಚರಂಡಿ ವ್ಯವಸ್ಥೆಯನ್ನು ಆದ್ಯತೆಯ ಮೇಲೆ ಮಾಡಿಕೊಟ್ಟು, ನಿವಾಸಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಗುರುವೈನವರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.