ಬೆಳಗಾವಿ: ‘ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಸೇರಿಸಿಕೊಂಡು ಸಂಯುಕ್ತ ಮಹಾರಾಷ್ಟ್ರ ರಚನೆಯಾಗಬೇಕು. ಗಡಿಯಲ್ಲಿರುವ ಮರಾಠಿ ಭಾಷಿಗರಿಗೆ ನ್ಯಾಯ ಸಿಗಬೇಕು’ ಎಂದು ಇಲ್ಲಿನ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಗಡಿ ವಿವಾದವನ್ನು ಮತ್ತೊಮ್ಮೆ ಕಣಕಿದ್ದಾರೆ.