<p><strong>ಬೆಳಗಾವಿ: </strong>ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಜುಲೈ 5ರಂದು ನಗರದಲ್ಲಿ ಸರಣಿ ಸಭೆಗಳನ್ನು ನಡೆಸಿ, ಇಲ್ಲಿಯೇ ತಂಗುವರು.</p>.<p>ಬೆಳಿಗ್ಗೆ 9ರಿಂದ ಸ್ಮಾರ್ಟ್ ಸಿಟಿ (ಕೆಯುಐಡಿಎಫ್ಸಿ), ನಗರಪಾಲಿಕೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸುವರು. ನಗರಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರೀಶೀಲನೆ ನಡೆಸುವರು. ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ನಂತರ, ನಗರಪಾಲಿಕೆ ಯೋಜನೆಗಳ ಪ್ರಗತಿ ಪರಿಶೀಲಿಸುವರು.</p>.<p>ಮಧ್ಯಾಹ್ನ 2.30ರಿಂದ ಬುಡಾದಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ಪಡೆಯುವರು; ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 5ರಿಂದ ಕೆಯುಐಡಿಎಫ್ಸಿ, ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಸಂಜೆ 6ಕ್ಕೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಜುಲೈ 6ರಂದು ಬೆಳಿಗ್ಗೆ 7ಕ್ಕೆ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಜುಲೈ 5ರಂದು ನಗರದಲ್ಲಿ ಸರಣಿ ಸಭೆಗಳನ್ನು ನಡೆಸಿ, ಇಲ್ಲಿಯೇ ತಂಗುವರು.</p>.<p>ಬೆಳಿಗ್ಗೆ 9ರಿಂದ ಸ್ಮಾರ್ಟ್ ಸಿಟಿ (ಕೆಯುಐಡಿಎಫ್ಸಿ), ನಗರಪಾಲಿಕೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸುವರು. ನಗರಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರೀಶೀಲನೆ ನಡೆಸುವರು. ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ನಂತರ, ನಗರಪಾಲಿಕೆ ಯೋಜನೆಗಳ ಪ್ರಗತಿ ಪರಿಶೀಲಿಸುವರು.</p>.<p>ಮಧ್ಯಾಹ್ನ 2.30ರಿಂದ ಬುಡಾದಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ಪಡೆಯುವರು; ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 5ರಿಂದ ಕೆಯುಐಡಿಎಫ್ಸಿ, ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಸಂಜೆ 6ಕ್ಕೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಜುಲೈ 6ರಂದು ಬೆಳಿಗ್ಗೆ 7ಕ್ಕೆ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>