<p><strong>ಬೆಳಗಾವಿ</strong>: ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆ ವರ್ತಕರು ಸಾವಿರಾರು ರೈತರೊಂದಿಗೆ ಮಂಗಳವಾರ ದಿನವಿಡೀ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಾರುಕಟ್ಟೆ ಪರವಾನಗಿ ರದ್ದುಗೊಳಿಸಿದ ನಿರ್ಧಾರವನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಾರುಕಟ್ಟೆ ಪರವಾನಗಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ, ವರ್ತಕರು ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ. ಅದಾದ ನಂತರ ರೈತ ಮುಖಂಡರ ಜತೆಗೆ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<p>ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಜೈ ಕಿಸಾನ್ ಮಾರುಕಟ್ಟೆಯಿಂದ ರಾಣಿ ಚನ್ನಮ್ಮನ ವೃತ್ತದವರೆಗೆ ವ್ಯಾಪಾರಿಗಳು ಮತ್ತು ರೈತರು ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜೈ ಕಿಸಾನ್ ಮಾರುಕಟ್ಟೆಯಲ್ಲಿ ವರ್ತಕರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡುತ್ತಿದ್ದಾರೆ. ಹಾಗಾಗಿ ಮಾರುಕಟ್ಟೆಯನ್ನು ಮತ್ತೆ ತೆರೆಯಬೇಕು’ ಎಂದು ರೈತರು ವಾದಿಸಿದರು.</p>.<p>ಶಾಸಕ ಅಭಯ ಪಾಟೀಲ, ‘ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಭೂಪರಿವರ್ತನೆ ರದ್ದುಗೊಳಿಸುವ ಅಧಿಕಾರವಿಲ್ಲ. ಆದರೆ, ಕಾನೂನುಗಳನ್ನು ಉಲ್ಲಂಘಿಸಿ ಅದನ್ನು ರದ್ದುಗೊಳಿಸಿದ್ದಾರೆ’ ಎಂದು ದೂರಿದರು.</p>.<p>‘ಈ ಹಿಂದೆ ಜೈ ಕಿಸಾನ್ ಮಾರುಕಟ್ಟೆಗೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ನೀಡಲಾಗಿದೆ. ಈಗ ಅದೇ ಅಧಿಕಾರಿಗಳು ಅದನ್ನು ಕಾನೂನುಬಾಹಿರ ಎಂದು ಹೇಳಲು ಸಾಧ್ಯವಿಲ್ಲ. ಈ ಮಾರುಕಟ್ಟೆ ಪರವಾನಗಿಯನ್ನು ಕಾನೂನು ಬಾಹಿರವಾಗಿ ರದ್ದುಗೊಳಿಸಲಾಗಿದೆ. ಎಲ್ಲ ವರ್ತಕರು ಮತ್ತು ರೈತರು ರಸ್ತೆಗೆ ಇಳಿದರೆ, ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ‘ಜೈ ಕಿಸಾನ್ ಮಾರುಕಟ್ಟೆ ವಿರುದ್ಧದ ಕ್ರಮ ಒಂದು ಪಿತೂರಿಯಾಗಿದೆ. ಅಕ್ರಮ ವ್ಯವಹಾರಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ ರೈತರಿಗೆ ಜಿಲ್ಲಾಡಳಿತ ಅನ್ಯಾಯ ಮಾಡಿದೆ’ ಎಂದು ದೂರಿದರು.</p>.<p>ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.</p>.<div><div class="bigfact-title">3 ತಾಸು ರಸ್ತೆ ಬಂದ್!</div><div class="bigfact-description">ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ 3 ತಾಸಿಗೂ ಅಧಿಕ ಸಮಯ ರಸ್ತೆ ತಡೆದು ಪ್ರತಿಭಟಿಸಿದ್ದರಿಂದ ವಿವಿಧ ಬಡಾವಣೆಗಳಿಗೆ ತೆರಳುವ ಸವಾರರು ಪರದಾಡುವಂತಾಯಿತು. ಚನ್ನಮ್ಮನ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆ ಮಧ್ಯೆಯೇ ನೂರಾರು ರೈತರು ಕುಳಿತು ಊಟ ಮಾಡಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆ ವರ್ತಕರು ಸಾವಿರಾರು ರೈತರೊಂದಿಗೆ ಮಂಗಳವಾರ ದಿನವಿಡೀ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಾರುಕಟ್ಟೆ ಪರವಾನಗಿ ರದ್ದುಗೊಳಿಸಿದ ನಿರ್ಧಾರವನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಾರುಕಟ್ಟೆ ಪರವಾನಗಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ, ವರ್ತಕರು ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ. ಅದಾದ ನಂತರ ರೈತ ಮುಖಂಡರ ಜತೆಗೆ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<p>ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಜೈ ಕಿಸಾನ್ ಮಾರುಕಟ್ಟೆಯಿಂದ ರಾಣಿ ಚನ್ನಮ್ಮನ ವೃತ್ತದವರೆಗೆ ವ್ಯಾಪಾರಿಗಳು ಮತ್ತು ರೈತರು ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜೈ ಕಿಸಾನ್ ಮಾರುಕಟ್ಟೆಯಲ್ಲಿ ವರ್ತಕರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡುತ್ತಿದ್ದಾರೆ. ಹಾಗಾಗಿ ಮಾರುಕಟ್ಟೆಯನ್ನು ಮತ್ತೆ ತೆರೆಯಬೇಕು’ ಎಂದು ರೈತರು ವಾದಿಸಿದರು.</p>.<p>ಶಾಸಕ ಅಭಯ ಪಾಟೀಲ, ‘ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಭೂಪರಿವರ್ತನೆ ರದ್ದುಗೊಳಿಸುವ ಅಧಿಕಾರವಿಲ್ಲ. ಆದರೆ, ಕಾನೂನುಗಳನ್ನು ಉಲ್ಲಂಘಿಸಿ ಅದನ್ನು ರದ್ದುಗೊಳಿಸಿದ್ದಾರೆ’ ಎಂದು ದೂರಿದರು.</p>.<p>‘ಈ ಹಿಂದೆ ಜೈ ಕಿಸಾನ್ ಮಾರುಕಟ್ಟೆಗೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ನೀಡಲಾಗಿದೆ. ಈಗ ಅದೇ ಅಧಿಕಾರಿಗಳು ಅದನ್ನು ಕಾನೂನುಬಾಹಿರ ಎಂದು ಹೇಳಲು ಸಾಧ್ಯವಿಲ್ಲ. ಈ ಮಾರುಕಟ್ಟೆ ಪರವಾನಗಿಯನ್ನು ಕಾನೂನು ಬಾಹಿರವಾಗಿ ರದ್ದುಗೊಳಿಸಲಾಗಿದೆ. ಎಲ್ಲ ವರ್ತಕರು ಮತ್ತು ರೈತರು ರಸ್ತೆಗೆ ಇಳಿದರೆ, ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ‘ಜೈ ಕಿಸಾನ್ ಮಾರುಕಟ್ಟೆ ವಿರುದ್ಧದ ಕ್ರಮ ಒಂದು ಪಿತೂರಿಯಾಗಿದೆ. ಅಕ್ರಮ ವ್ಯವಹಾರಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ ರೈತರಿಗೆ ಜಿಲ್ಲಾಡಳಿತ ಅನ್ಯಾಯ ಮಾಡಿದೆ’ ಎಂದು ದೂರಿದರು.</p>.<p>ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.</p>.<div><div class="bigfact-title">3 ತಾಸು ರಸ್ತೆ ಬಂದ್!</div><div class="bigfact-description">ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ 3 ತಾಸಿಗೂ ಅಧಿಕ ಸಮಯ ರಸ್ತೆ ತಡೆದು ಪ್ರತಿಭಟಿಸಿದ್ದರಿಂದ ವಿವಿಧ ಬಡಾವಣೆಗಳಿಗೆ ತೆರಳುವ ಸವಾರರು ಪರದಾಡುವಂತಾಯಿತು. ಚನ್ನಮ್ಮನ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆ ಮಧ್ಯೆಯೇ ನೂರಾರು ರೈತರು ಕುಳಿತು ಊಟ ಮಾಡಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>