‘ನಾನು ಚುನಾವಣೆಗೆ ಸ್ಪರ್ಧಿಸುವ ಮುನ್ನ, ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿದ್ದೆ. ಆಗ, ಬಡವರು, ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ ಎಂದು ಹಲವರು ಬೇಸರ ವ್ಯಕ್ತಪಡಿಸಿದರು. ಹಾಗಾಗಿ, ನನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅದನ್ನೇ ಮೊದಲ ಭರವಸೆಯನ್ನಾಗಿಸಿದ್ದೇನೆ’ ಎಂದು ಬಿ.ಎಸ್ಸಿ ಪದವೀಧರ ಗುರುಪುತ್ರ ‘ಪ್ರಜಾವಾಣಿ’ಗೆ ತಿಳಿಸಿದರು.