<p><strong>ಬೆಳಗಾವಿ: </strong>ಜಿಲ್ಲಾಡಳಿತದಿಂದ ನಗರದಲ್ಲಿ ಗುರುವಾರ ಮಾಸ್ಕ್ (ಮುಖಗವಸು) ದಿನ ಆಚರಿಸಲಾಯಿತು.</p>.<p>ಮಾಸ್ಕ್ ಧರಿಸುವ ಮೂಲಕ ಮಾರಕ ಕೊರೊನಾದಿಂದ ದೂರ ಇರಬಹುದು ಎಂದು ಜಾಗೃತಿ ಮೂಡಿಸಲಾಯಿತು.</p>.<p>ಅಶೋಕ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಆಗಾಗ ಕೈತೊಳೆಯುವ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<p>ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು.</p>.<p>ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಕೋವಿಡ್-19 ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ, ಉಪವಿಭಾಗಾಧಿಕಾರಿ ಅಶೋಕ್, ಡಿಸಿಪಿ ಯಶೋದಾ ವಂಟಗೋಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲಾಡಳಿತದಿಂದ ನಗರದಲ್ಲಿ ಗುರುವಾರ ಮಾಸ್ಕ್ (ಮುಖಗವಸು) ದಿನ ಆಚರಿಸಲಾಯಿತು.</p>.<p>ಮಾಸ್ಕ್ ಧರಿಸುವ ಮೂಲಕ ಮಾರಕ ಕೊರೊನಾದಿಂದ ದೂರ ಇರಬಹುದು ಎಂದು ಜಾಗೃತಿ ಮೂಡಿಸಲಾಯಿತು.</p>.<p>ಅಶೋಕ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಆಗಾಗ ಕೈತೊಳೆಯುವ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<p>ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು.</p>.<p>ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಕೋವಿಡ್-19 ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ, ಉಪವಿಭಾಗಾಧಿಕಾರಿ ಅಶೋಕ್, ಡಿಸಿಪಿ ಯಶೋದಾ ವಂಟಗೋಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>