ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ

Last Updated 2 ಜೂನ್ 2020, 15:19 IST
ಅಕ್ಷರ ಗಾತ್ರ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾ ವಿಭಾಗದಿಂದ ಆಶಾ ಕಾರ್ಯಕರ್ತೆಯರಿಗೆ ‘ಧನ್ಯವಾದ ಅರ್ಪಣೆ’ ಕಾರ್ಯಕ್ರಮವನ್ನು ತಾಲ್ಲೂಕಿನ ಪಂತನಗರದ ಶಿವಾಲಯ, ಬೆಂಡಿಗೇರಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಿಂಡಲಗಾದ ಸಿದ್ಧಿವಿನಾಯಕ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಅವರಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಕೊಡೆಗಳನ್ನು ವಿತರಿಸಲಾಯಿತು.

ಆರ್‌ಎಸ್‌ಎಸ್‌ ಸಹಪ್ರಾಂತ ಪ್ರಚಾರಕ ನರೇಂದ್ರ, ಆರ್‌ಎಸ್‌ಎಸ್‌ ವಿಭಾಗ ಕಾರ್ಯವಾಹ ಕೃಷ್ಣಾನಂದ ಕಾಮತ ಪಂತನಗರ, ಸಂಘದ ಪ್ರಮುಖರಾದ ಕೃಷ್ಣ ಭಟ್ ಮತ್ತು ಅಶೋಕ ಶಿಂತ್ರೆ ಬೆಂಡಿಗೇರಿಯಲ್ಲಿ, ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಹಿಂಡಲಗಾದಲ್ಲಿ ಗೌರವಿಸಿದರು. ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮುಖಂಡ ಅಭಯ ಅವಲಕ್ಕಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT