<p><strong>ಉಗರಗೋಳ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ 'ಸಪ್ತಪದಿ’ ಯೋಜನೆ ಅಡಿ ಭಾನುವಾರ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು.</p>.<p>ದೇವಸ್ಥಾನ ಆವರಣದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗಿತ್ತು. ಯಲ್ಲಮ್ಮನ ಸನ್ನಿಧಿಯಲ್ಲಿ 10 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.</p>.<p>ಈ ಹಿಂದೆ ಕೋವಿಡ್, ಲಾಕ್ಡೌನ್ ಹಾಗೂ ವಿಧಾನ ಪರಿಷತ್ ಚುನಾವಣೆ ಕಾರಣ ವಿವಾಹ ಮಹೋತ್ಸವವನ್ನು ಎರಡು ಬಾರಿ ಮುಂದೂಡಲಾಗಿತ್ತು. ಈಗ ಕೋವಿಡ್ ಹಾವಳಿ ತಗ್ಗಿದ್ದರಿಂದ ಎಲ್ಲ ಕಾರ್ಯಗಳು ಸುಗಮವಾಗಿ ನೆರವೇರಿದವು.</p>.<p>‘ವಧುವಿಗೆ ₹ 40 ಸಾವಿರ ಮೌಲ್ಯದ ಚಿನ್ನದ ತಾಳಿ, ಮೂರು ಚಿನ್ನದ ಗುಂಡುಗಳ ಜತೆಗೆ ಧಾರೆಯ ಸೀರೆ, ರವಿಕೆ ಖರೀದಿಗಾಗಿ ₹ 10 ಸಾವಿರ ಪ್ರೋತ್ಸಾಹಧನ ನೀಡಲಾಗಿದೆ. ವರನಿಗೆ ಪಂಚೆ, ಶರ್ಟ್, ಶಲ್ಯಕ್ಕಾಗಿ ₹ 5 ಸಾವಿರ ನೀಡಲಾಯಿತು.</p>.<p>ಕಾರ್ಯಕ್ರಮವನ್ನು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಉದ್ಘಾಟಿಸಿದರು. ಉಗರಗೋಳದ ಮಹಾಂತ ಸ್ವಾಮೀಜಿ, ರಾಮಾರೂಢ ಸ್ವಾಮೀಜಿ, ಗುರ್ಲಹೊಸೂರಿನ ದಂಡಪಾಣಿ ದೀಕ್ಷಿತ, ಪ್ರಸನ್ನ ಸುಂದರೇಶ ದೀಕ್ಷಿತ, ಗಂಗಾಧರ ದೀಕ್ಷಿತ, ಬೆಟಸೂರಿನ ಅಜ್ಜಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೈಲಹೊಂಗಲ ಎಸಿ ಶಶಿಧರ ಇದ್ದರು.</p>.<p>ಯಲ್ಲಮ್ಮನಗುಡ್ಡಕ್ಕೆ ಬಂದ ಭಕ್ತಾದಿಗಳು ನವ ವಧು-ವರರಿಗೆ ಅಕ್ಷತೆ ಹಾಕಿ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ 'ಸಪ್ತಪದಿ’ ಯೋಜನೆ ಅಡಿ ಭಾನುವಾರ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು.</p>.<p>ದೇವಸ್ಥಾನ ಆವರಣದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗಿತ್ತು. ಯಲ್ಲಮ್ಮನ ಸನ್ನಿಧಿಯಲ್ಲಿ 10 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.</p>.<p>ಈ ಹಿಂದೆ ಕೋವಿಡ್, ಲಾಕ್ಡೌನ್ ಹಾಗೂ ವಿಧಾನ ಪರಿಷತ್ ಚುನಾವಣೆ ಕಾರಣ ವಿವಾಹ ಮಹೋತ್ಸವವನ್ನು ಎರಡು ಬಾರಿ ಮುಂದೂಡಲಾಗಿತ್ತು. ಈಗ ಕೋವಿಡ್ ಹಾವಳಿ ತಗ್ಗಿದ್ದರಿಂದ ಎಲ್ಲ ಕಾರ್ಯಗಳು ಸುಗಮವಾಗಿ ನೆರವೇರಿದವು.</p>.<p>‘ವಧುವಿಗೆ ₹ 40 ಸಾವಿರ ಮೌಲ್ಯದ ಚಿನ್ನದ ತಾಳಿ, ಮೂರು ಚಿನ್ನದ ಗುಂಡುಗಳ ಜತೆಗೆ ಧಾರೆಯ ಸೀರೆ, ರವಿಕೆ ಖರೀದಿಗಾಗಿ ₹ 10 ಸಾವಿರ ಪ್ರೋತ್ಸಾಹಧನ ನೀಡಲಾಗಿದೆ. ವರನಿಗೆ ಪಂಚೆ, ಶರ್ಟ್, ಶಲ್ಯಕ್ಕಾಗಿ ₹ 5 ಸಾವಿರ ನೀಡಲಾಯಿತು.</p>.<p>ಕಾರ್ಯಕ್ರಮವನ್ನು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಉದ್ಘಾಟಿಸಿದರು. ಉಗರಗೋಳದ ಮಹಾಂತ ಸ್ವಾಮೀಜಿ, ರಾಮಾರೂಢ ಸ್ವಾಮೀಜಿ, ಗುರ್ಲಹೊಸೂರಿನ ದಂಡಪಾಣಿ ದೀಕ್ಷಿತ, ಪ್ರಸನ್ನ ಸುಂದರೇಶ ದೀಕ್ಷಿತ, ಗಂಗಾಧರ ದೀಕ್ಷಿತ, ಬೆಟಸೂರಿನ ಅಜ್ಜಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೈಲಹೊಂಗಲ ಎಸಿ ಶಶಿಧರ ಇದ್ದರು.</p>.<p>ಯಲ್ಲಮ್ಮನಗುಡ್ಡಕ್ಕೆ ಬಂದ ಭಕ್ತಾದಿಗಳು ನವ ವಧು-ವರರಿಗೆ ಅಕ್ಷತೆ ಹಾಕಿ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>