<p><strong>ಬೆಳಗಾವಿ</strong>: ನಗರ ಪೊಲೀಸರು ಪ್ರತ್ಯೇಕ ಪ್ರಕರಣದಲ್ಲಿ, ಇಸ್ಪೀಟ್ ಹಾಗೂ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 13 ಮಂದಿಯನ್ನು ಬಂಧಿಸಿದ್ದಾರೆ.</p>.<p>ವಡಗಾವಿಯ ಮಟ್ಕಾ ಅಡ್ಡೆ ಮೇಲೆ ಶಹಾಪೂರ ಠಾಣೆ ಪೊಲೀಸರು ದಾಳಿ ನಡೆಸಿ ಬಾಬು ಜಾಧವ, ವಿನಾಯಕ ಬಿರ್ಜೆ ಹಾಗೂ ಅಬ್ಜಲ್ ಶೇಠ್ ಎನ್ನುವವರನ್ನು ಬಂಧಿಸಿದ್ದಾರೆ. ಅವರಿಂದ ₹ 17ಸಾವಿರ ವಶಪಡಿಸಿಕೊಂಡಿದ್ದಾರೆ.</p>.<p>ಮಂಡೋಳ್ಳಿ ರಸ್ತೆಯ ಶಾಂತಿ ನಗರ ಗಣಪತಿ ಮಂದಿರದ ಬಳಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಥೋನಿ ಮೆಂಡೋನ್ಸ, ಸಂತೋಷ ರಾಠೋಡ ಮತ್ತು ಸುನೀಲ ಶರ್ಮ ಬಂಧಿತರು. ಅವರಿಂದ ₹ 8,200, ದ್ವಿಚಕ್ರವಾಹನ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾಕತಿ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ರಾಮ ಕುಂಬರ್ಗಿ, ಯಲ್ಲೇಶ ಕಿಶೆ, ಶಿವಪ್ಪ ನಾಯ್ಕ, ಸಿದ್ರಾಯಿ ಹಾಲಭಾವಿ, ಜ್ಯೋತಿಬಾ ಕುಮ್ಮನಾಚೆ, ಕರೆಪ್ಪ ಗಿರಣ್ಣವರ ಹಾಗೂ ಸಿದ್ರಾಯಿ ನಾಯ್ಕ ಬಂಧಿತರು. ಅವರಿಂದ ₹ 22,650 ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರ ಪೊಲೀಸರು ಪ್ರತ್ಯೇಕ ಪ್ರಕರಣದಲ್ಲಿ, ಇಸ್ಪೀಟ್ ಹಾಗೂ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 13 ಮಂದಿಯನ್ನು ಬಂಧಿಸಿದ್ದಾರೆ.</p>.<p>ವಡಗಾವಿಯ ಮಟ್ಕಾ ಅಡ್ಡೆ ಮೇಲೆ ಶಹಾಪೂರ ಠಾಣೆ ಪೊಲೀಸರು ದಾಳಿ ನಡೆಸಿ ಬಾಬು ಜಾಧವ, ವಿನಾಯಕ ಬಿರ್ಜೆ ಹಾಗೂ ಅಬ್ಜಲ್ ಶೇಠ್ ಎನ್ನುವವರನ್ನು ಬಂಧಿಸಿದ್ದಾರೆ. ಅವರಿಂದ ₹ 17ಸಾವಿರ ವಶಪಡಿಸಿಕೊಂಡಿದ್ದಾರೆ.</p>.<p>ಮಂಡೋಳ್ಳಿ ರಸ್ತೆಯ ಶಾಂತಿ ನಗರ ಗಣಪತಿ ಮಂದಿರದ ಬಳಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಥೋನಿ ಮೆಂಡೋನ್ಸ, ಸಂತೋಷ ರಾಠೋಡ ಮತ್ತು ಸುನೀಲ ಶರ್ಮ ಬಂಧಿತರು. ಅವರಿಂದ ₹ 8,200, ದ್ವಿಚಕ್ರವಾಹನ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾಕತಿ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ರಾಮ ಕುಂಬರ್ಗಿ, ಯಲ್ಲೇಶ ಕಿಶೆ, ಶಿವಪ್ಪ ನಾಯ್ಕ, ಸಿದ್ರಾಯಿ ಹಾಲಭಾವಿ, ಜ್ಯೋತಿಬಾ ಕುಮ್ಮನಾಚೆ, ಕರೆಪ್ಪ ಗಿರಣ್ಣವರ ಹಾಗೂ ಸಿದ್ರಾಯಿ ನಾಯ್ಕ ಬಂಧಿತರು. ಅವರಿಂದ ₹ 22,650 ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>