ಎಂಬಿಎ ಪದವೀಧರರಾದ ಅವರು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸೀನಿಯರ್ ಟ್ಯಾಕ್ಸ್ ಅಸೋಸಿಯೇಟ್ ಆಗಿದ್ದರು. ಮೂರು ವರ್ಷ ಅಲ್ಲಿ ಕೆಲಸ ಮಾಡಿದ್ದರು. ಹಲವು ಕಾರಣಗಳಿಂದಾಗಿ ಐದು ವರ್ಷಗಳ ಹಿಂದೆ ಊರಿಗೆ ಬಂದು ಕೃಷಿ ಮಾಡುತ್ತಿದ್ದಾರೆ. ಕೆಲಸ ಬಿಟ್ಟು ಕೃಷಿ ಮಾಡಲು ಊರಿಗೆ ಬಂದ ವೆಂಕಟೇಶ ಅವರನ್ನು ಮೂದಲಿಸಿದವರೇ ಹೆಚ್ಚು. ಬಳಿಕ ಎಲ್ಲರೂ ಮೆಚ್ಚುವಂತೆ ಕೃಷಿ ಮಾಡುತ್ತಿದ್ದಾರೆ. ಹತ್ತು ಎಕರೆಯಲ್ಲೂ ನೈಸರ್ಗಿಕ ಕೃಷಿ ಪದ್ಧತಿ ಅನುಸರಿಸುತ್ತಿದ್ದಾರೆ. ಇದಕ್ಕಾಗಿಯೇ ಜಾನುವಾರು ಸಾಕಿದ್ದಾರೆ. ಅಕ್ಕಪಕ್ಕದ ರೈತರಿಂದ ದೇಶಿ ಹಸುಗಳ ಗಂಜಲವನ್ನು ಸಂಗ್ರಹಿಸುತ್ತಾರೆ. ಗೀರ್, ಕಿಲಾರಿ ಆಕಳುಗಳು ಮತ್ತು ಹೋರಿ ಸಾಕಿದ್ದಾರೆ. ಇವುಗಳಿಗೆ ಜಮೀ
ನಿನ ಒಂದು ಭಾಗದಲ್ಲಿ ಮೇ
ವಿನ ಬೆಳೆ ಬೆಳೆಯುತ್ತಿದ್ದಾರೆ.