ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಹೊಸ ಟ್ಯಾಂಕರ್ ಖರೀದಿಸುವಂತೆ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಸೂಚಿಸಿದ್ದೇವೆ. ಕೆಲವರು ಹೊಸ ಟ್ಯಾಂಕರ್ ಖರೀದಿಸಿದ್ದಾರೆ. ಇನ್ನೂಳಿದವರು ಬಾಡಿಗೆ ಮೂಲಕ ಪಡೆದು, ನೀರು ಸರಬರಾಜು ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಇರುವ ಗ್ರಾಮ ಪಂಚಾಯ್ತಿಯವರು ಆಯಾ ತಹಶೀಲ್ದಾರ್ ಗಮನಕ್ಕೆ ತಂದರೆ, ಟ್ಯಾಂಕರ್ ಸರಬರಾಜು ಮಾಡಲಾಗುವುದು’ ಎಂದು ತಿಳಿಸಿದರು.