<p><strong>ಬೆಳಗಾವಿ</strong>: ‘ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲಲೇಬೇಕು. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಘೋಷಿಸಲು ಇನ್ನೊಂದು ತಿಂಗಳಲ್ಲಿ ಸಭೆ ನಡೆಸುತ್ತೇವೆ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ಲೋಕಸಭೆ ಚುನಾವಣೆಗೆ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ, ‘ಆ ವಿಷಯವನ್ನು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ. ಲೋಕಸಭೆ ಚುನಾವಣೆಯ ಸಭೆ ಬಳಿಕ ಇದು ಸ್ಪಷ್ಟವಾಗಿ ಗೊತ್ತಾಗಲಿದೆ’ ಎಂದು ಉತ್ತರಿಸಿದರು.</p><p>‘ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿ-ಮುಂಬೈ ಕಾರ್ಯಾಚರಣೆ ನಡೆಸಬೇಕು. ಈ ಕುರಿತಾಗಿ ಚರ್ಚಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬೆಳಗಾವಿ ನಗರದಲ್ಲಿ ಕೈಗೆತ್ತಿಕೊಂಡ ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ಈಗ ಅವುಗಳನ್ನು ಪೂರ್ಣಗೊಳಿಸಿ, ಉದ್ಘಾಟಿಸುತ್ತೇವೆ’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲಲೇಬೇಕು. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಘೋಷಿಸಲು ಇನ್ನೊಂದು ತಿಂಗಳಲ್ಲಿ ಸಭೆ ನಡೆಸುತ್ತೇವೆ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ಲೋಕಸಭೆ ಚುನಾವಣೆಗೆ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ, ‘ಆ ವಿಷಯವನ್ನು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ. ಲೋಕಸಭೆ ಚುನಾವಣೆಯ ಸಭೆ ಬಳಿಕ ಇದು ಸ್ಪಷ್ಟವಾಗಿ ಗೊತ್ತಾಗಲಿದೆ’ ಎಂದು ಉತ್ತರಿಸಿದರು.</p><p>‘ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿ-ಮುಂಬೈ ಕಾರ್ಯಾಚರಣೆ ನಡೆಸಬೇಕು. ಈ ಕುರಿತಾಗಿ ಚರ್ಚಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬೆಳಗಾವಿ ನಗರದಲ್ಲಿ ಕೈಗೆತ್ತಿಕೊಂಡ ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ಈಗ ಅವುಗಳನ್ನು ಪೂರ್ಣಗೊಳಿಸಿ, ಉದ್ಘಾಟಿಸುತ್ತೇವೆ’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>