<p><strong>ಸತ್ತಿಗೇರಿ:</strong> ಗ್ರಾಮದಲ್ಲಿ ಅಭಿವೃದ್ಧಿ ಕೆಲಸಕ್ಕೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ, ಸಮೀಪದ ಸೊಪ್ಪಡ್ಲ ಗ್ರಾಮ ಪಂಚಾಯ್ತಿ ಕಚೇರಿಗೆ ಸದಸ್ಯರು ಶನಿವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು.</p>.<p>‘ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಮ್ಮ ಗ್ರಾ.ಪಂಗೆ ಎಷ್ಟು ಮನೆ ಮಂಜೂರಾಗಿವೆ ಎಂದು ಪಿಡಿಒ ವಹೀದಾ ಮುಲ್ಲಾ ಮಾಹಿತಿ ಕೊಡುತ್ತಿಲ್ಲ. ನರೇಗಾ ಯೋಜನೆಯಡಿ ಕೈಗೊಳ್ಳಬೇಕಿರುವ ಕೆಲಸಕ್ಕೆ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಚರ್ಚಿಸಲು ಕಚೇರಿಗೆ ಹೋದರೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ’ ಎಂದು ದೂರಿದರು.</p>.<p>ಸವದತ್ತಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಸ್ಥಳಕ್ಕಾಗಮಿಸಿ ಸಮಸ್ಯೆ ಆಲಿಸಿದರು. ‘ನಿಮ್ಮ ಆರೋಪಗಳ ಪರಿಶೀಲಿಸಿ, ಕ್ರಮ ಜರುಗಿಸಲಾಗುವುದು’ ಎಂದು ಅವರು ಭರವಸೆ ನೀಡಿದ್ದರಿಂದ ಸದಸ್ಯರು ಪ್ರತಿಭಟನೆ ಹಿಂಪಡೆದರು. </p>.<p>ಗ್ರಾ.ಪಂ ಅಧ್ಯಕ್ಷೆ ಸತ್ಯವ್ವ ಗೊರಗುದ್ದಿ, ಸದಸ್ಯರಾದ ಕಿರಣ ಹುಣಶ್ಯಾಳ, ರವಿಕಿರಣ ಪಾಟೀಲ, ಮಹಾದೇವಿ ಕೊಡ್ಲಿವಾಡ, ಸುವರ್ಣ ಹೊಸಮಠ, ಸುನೀತಾ ಕಾಡಮಠ, ಮಹಾದೇವ ಯಡ್ರಾಂವಿ, ಆನಂದ ಬಾಗೋಡಿ, ಹನುಮಂತ ದುರಗನ್ನವರ, ಮಹಾದೇವ ತಳವಾರ, ಸೋಹಿಲ್ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸತ್ತಿಗೇರಿ:</strong> ಗ್ರಾಮದಲ್ಲಿ ಅಭಿವೃದ್ಧಿ ಕೆಲಸಕ್ಕೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ, ಸಮೀಪದ ಸೊಪ್ಪಡ್ಲ ಗ್ರಾಮ ಪಂಚಾಯ್ತಿ ಕಚೇರಿಗೆ ಸದಸ್ಯರು ಶನಿವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು.</p>.<p>‘ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಮ್ಮ ಗ್ರಾ.ಪಂಗೆ ಎಷ್ಟು ಮನೆ ಮಂಜೂರಾಗಿವೆ ಎಂದು ಪಿಡಿಒ ವಹೀದಾ ಮುಲ್ಲಾ ಮಾಹಿತಿ ಕೊಡುತ್ತಿಲ್ಲ. ನರೇಗಾ ಯೋಜನೆಯಡಿ ಕೈಗೊಳ್ಳಬೇಕಿರುವ ಕೆಲಸಕ್ಕೆ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಚರ್ಚಿಸಲು ಕಚೇರಿಗೆ ಹೋದರೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ’ ಎಂದು ದೂರಿದರು.</p>.<p>ಸವದತ್ತಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಸ್ಥಳಕ್ಕಾಗಮಿಸಿ ಸಮಸ್ಯೆ ಆಲಿಸಿದರು. ‘ನಿಮ್ಮ ಆರೋಪಗಳ ಪರಿಶೀಲಿಸಿ, ಕ್ರಮ ಜರುಗಿಸಲಾಗುವುದು’ ಎಂದು ಅವರು ಭರವಸೆ ನೀಡಿದ್ದರಿಂದ ಸದಸ್ಯರು ಪ್ರತಿಭಟನೆ ಹಿಂಪಡೆದರು. </p>.<p>ಗ್ರಾ.ಪಂ ಅಧ್ಯಕ್ಷೆ ಸತ್ಯವ್ವ ಗೊರಗುದ್ದಿ, ಸದಸ್ಯರಾದ ಕಿರಣ ಹುಣಶ್ಯಾಳ, ರವಿಕಿರಣ ಪಾಟೀಲ, ಮಹಾದೇವಿ ಕೊಡ್ಲಿವಾಡ, ಸುವರ್ಣ ಹೊಸಮಠ, ಸುನೀತಾ ಕಾಡಮಠ, ಮಹಾದೇವ ಯಡ್ರಾಂವಿ, ಆನಂದ ಬಾಗೋಡಿ, ಹನುಮಂತ ದುರಗನ್ನವರ, ಮಹಾದೇವ ತಳವಾರ, ಸೋಹಿಲ್ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>