<p><strong>ಬೆಳಗಾವಿ: </strong>ರಾಜ್ಯ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಒಕ್ಕೂಟದ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಸತೀಶ ಜಾರಕಿಹೊಳಿ ಗೋಕಾಕದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವುದು ಉತ್ತಮ ಕ್ರಮವಾಗಿದೆ. ಕಲಾವಿದರು ದಶಕಗಳಿಂದ ತಮ್ಮ ಕಲೆಯಿಂದ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರವು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ನಿಷೇಧಿಸುವ ಮೂಲಕ ಈ ಕಲಾವಿದರಿಗೆ ಅನುಕೂಲ ಮಾಡಿಕೊಟ್ಟಿದೆ’ ಎಂದರು.</p>.<p>‘ಮಣ್ಣಿನ ಮೂರ್ತಿ ತಯಾರಕರಿಗೂ ಗುರುತಿನ ಚೀಟಿ, ವೃದ್ಧಾಪ್ಯ ವೇತನದಂತಹ ಸೌಲಭ್ಯಗಳು ಸಿಗುವಂತಾಗಬೇಕು’ ಎಂದು ಆಶಿಸಿದರು.</p>.<p>ಸಂಘದ ರಾಜ್ಯ ಘಟಕದ ಮೋಹನ ಚವಾಣ, ಕಾರ್ಯದರ್ಶಿ ಮುತ್ತಣ್ಣ ಭರಡಿ, ಮಲ್ಲಿಕಾರ್ಜುನ ಅನಿಗೋಳ, ಶಂಕರ ಕಮ್ಮಾರ, ಬೀಮಪ್ಪ ಕಮ್ಮಾರ, ಕೊಣ್ಣೂರಿನ ಕಲಾವಿದರಾದ ಶಂಕರ ಕುಂಬಾರ, ಬಸವರಾಜ ಕುಂಬಾರ, ಗೋಪಾಲ ಕುಂಬಾರ, ಚನ್ನಬಸವ ತೀರಕಣ್ಣವರ, ಯಮನಪ್ಪ ಕುಂಬಾರ, ಸುರೇಶ ಕುಂಬಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ರಾಜ್ಯ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಒಕ್ಕೂಟದ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಸತೀಶ ಜಾರಕಿಹೊಳಿ ಗೋಕಾಕದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವುದು ಉತ್ತಮ ಕ್ರಮವಾಗಿದೆ. ಕಲಾವಿದರು ದಶಕಗಳಿಂದ ತಮ್ಮ ಕಲೆಯಿಂದ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರವು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ನಿಷೇಧಿಸುವ ಮೂಲಕ ಈ ಕಲಾವಿದರಿಗೆ ಅನುಕೂಲ ಮಾಡಿಕೊಟ್ಟಿದೆ’ ಎಂದರು.</p>.<p>‘ಮಣ್ಣಿನ ಮೂರ್ತಿ ತಯಾರಕರಿಗೂ ಗುರುತಿನ ಚೀಟಿ, ವೃದ್ಧಾಪ್ಯ ವೇತನದಂತಹ ಸೌಲಭ್ಯಗಳು ಸಿಗುವಂತಾಗಬೇಕು’ ಎಂದು ಆಶಿಸಿದರು.</p>.<p>ಸಂಘದ ರಾಜ್ಯ ಘಟಕದ ಮೋಹನ ಚವಾಣ, ಕಾರ್ಯದರ್ಶಿ ಮುತ್ತಣ್ಣ ಭರಡಿ, ಮಲ್ಲಿಕಾರ್ಜುನ ಅನಿಗೋಳ, ಶಂಕರ ಕಮ್ಮಾರ, ಬೀಮಪ್ಪ ಕಮ್ಮಾರ, ಕೊಣ್ಣೂರಿನ ಕಲಾವಿದರಾದ ಶಂಕರ ಕುಂಬಾರ, ಬಸವರಾಜ ಕುಂಬಾರ, ಗೋಪಾಲ ಕುಂಬಾರ, ಚನ್ನಬಸವ ತೀರಕಣ್ಣವರ, ಯಮನಪ್ಪ ಕುಂಬಾರ, ಸುರೇಶ ಕುಂಬಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>