<p><strong>ಬೆಳಗಾವಿ</strong>: ‘ಇಲ್ಲಿ ಮರಾಠಿ ನಾಮಫಲಕಗಳನ್ನು ಅಳವಡಿಸಲು ಅವಕಾಶ ನೀಡಬೇಕು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾ ಮುಖಂಡರು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಎಂಇಎಸ್ ಮುಖಂಡ ಶುಭಂ ಶೇಳಕೆ ಮಾತನಾಡಿ, ‘ಮರಾಠಿಯಲ್ಲಿ ಫಲಕಗಳನ್ನು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಪ್ರಕಾರ ಅನುವು ಮಾಡಿಕೊಡಬೇಕು. ಶಿವಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಶಿರೋಳಕರ ಕಾರಿನಲ್ಲಿ ಅಳವಡಿಸಿದ್ದ ಮರಾಠಿ ಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮರಾಠಿ ಭಾಷಿಗರಾದ ನಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ವಿಷಯ ಮಹಾನಗರಪಾಲಿಕೆ ವ್ಯಾಪ್ತಿಗೆ ಬರುತ್ತದೆ. ಮನವಿಯನ್ನು ಅಲ್ಲಿನ ಆಯುಕ್ತರಿಗೆ ಕಳುಹಿಸಿಕೊಡಲಾಗುವುದು’ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.</p>.<p>ಶಿವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಶಿರೋಳಕರ, ಮುಖಂಡರಾದ ಅರವಿಂದ ನಾಗನೂರಿ, ಭಂಡು ಕೇರವಾಡ್ಕರ, ರಂಜಿತ ಪಾಟೀಲ, ಪ್ರವೀಣ ತೇಜಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿ ಮರಾಠಿ ನಾಮಫಲಕಗಳನ್ನು ಅಳವಡಿಸಲು ಅವಕಾಶ ನೀಡಬೇಕು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾ ಮುಖಂಡರು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಎಂಇಎಸ್ ಮುಖಂಡ ಶುಭಂ ಶೇಳಕೆ ಮಾತನಾಡಿ, ‘ಮರಾಠಿಯಲ್ಲಿ ಫಲಕಗಳನ್ನು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಪ್ರಕಾರ ಅನುವು ಮಾಡಿಕೊಡಬೇಕು. ಶಿವಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಶಿರೋಳಕರ ಕಾರಿನಲ್ಲಿ ಅಳವಡಿಸಿದ್ದ ಮರಾಠಿ ಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮರಾಠಿ ಭಾಷಿಗರಾದ ನಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ವಿಷಯ ಮಹಾನಗರಪಾಲಿಕೆ ವ್ಯಾಪ್ತಿಗೆ ಬರುತ್ತದೆ. ಮನವಿಯನ್ನು ಅಲ್ಲಿನ ಆಯುಕ್ತರಿಗೆ ಕಳುಹಿಸಿಕೊಡಲಾಗುವುದು’ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.</p>.<p>ಶಿವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಶಿರೋಳಕರ, ಮುಖಂಡರಾದ ಅರವಿಂದ ನಾಗನೂರಿ, ಭಂಡು ಕೇರವಾಡ್ಕರ, ರಂಜಿತ ಪಾಟೀಲ, ಪ್ರವೀಣ ತೇಜಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>