ಅಧ್ಯಕ್ಷ ದೀಪಕ ದಳವಿ ಮಾತನಾಡಿ, ‘ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಭಂಗ ಮಾಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇದರಿಂದ ಮರಾಠಾ ಜನರ ಆತಂಕ ಮತ್ತು ವೇದನೆ ಹೆಚ್ಚಾಗಿದೆ’ ಎಂದು ಹೇಳಿದರು.