ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಂಇಎಸ್‌ನವರು ನಿಗಮ ವಿರೋಧಿಸಬಾರದು’

Last Updated 21 ನವೆಂಬರ್ 2020, 12:19 IST
ಅಕ್ಷರ ಗಾತ್ರ

ಬೆಳಗಾವಿ: ‘ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸುವುದನ್ನು ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಾಯಕರು ವಿರೋಧಿಸಿದರೆ, ಅವರು ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಬಂದ್‍ಗೆ ಕರೆ ನೀಡಿದ ಸಂಘಟನೆಗಳಲ್ಲೇ ಮರಾಠಾ ಸಮುದಾಯದವರಿದ್ದಾರೆ. ಮರಾಠಾ–ಮರಾಠಿ ನಡುವಿನ ವ್ಯತ್ಯಾಸವನ್ನು ಆ ಸಂಘಟನೆಗಳು ತಿಳಿದುಕೊಳ್ಳಬೇಕು. ಕನ್ನಡ ಮಾತನಾಡುವ ಹಲವರು ಮರಾಠಾ ಸಮಾಜದಲ್ಲಿದ್ದಾರೆ’ ಎಂದರು.

‘ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇವೆ. ಮರಾಠಾ ಸಮುದಾಯದಲ್ಲಿರುವ ಕನ್ನಡಿಗರಿಗೆ ಅನ್ಯಾಯ ಆಗಬಾರದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT