ಅಂಗಡಿಗಳು ಹಾಗೂ ಮಳಿಗೆಗಳಲ್ಲಿನ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ನಗರಪಾಲಿಕೆಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಇದನ್ನು ಖಂಡಿಸಿ ಹಾಗೂ ನೋಟಿಸ್ ಜಾರಿಗೊಳಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಮುಖಂಡ ಶುಭಂ ಶೇಳಕೆ ನೇತೃತ್ವದಲ್ಲಿ ಮನವಿ ಮಾಡಿದ್ದಾರೆ.