<p><strong>ಬೆಳಗಾವಿ:</strong> 1986ರ ಜೂನ್ 1ರಂದು ಮಹಾರಾಷ್ಟ್ರದ ನಾಯಕರು ಆರಂಭಿಸಿದ ಗಡಿ ಚಳವಳಿ ಕಾಲಕ್ಕೆ ಸಂಭವಿಸಿದ ಹಿಂಸಾಚಾರದಲ್ಲಿ, ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಮೃತಪಟ್ಟ 9 ಮಂದಿಗೆ ತಾಲ್ಲೂಕಿನ ಹಿಂಡಲಗಾದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವತಿಯಿಂದ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>‘ಸುಪ್ರೀಂ ಕೋರ್ಟ್ನಲ್ಲಿ ಇರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದವನ್ನು ಬೇಗ ಇತ್ಯರ್ಥಪಡಿಸಲು ಮಹಾರಾಷ್ಟ್ರ ಸರ್ಕಾರ ಕ್ರಮ ವಹಿಸಬೇಕು. ಗಡಿಯಲ್ಲಿ ಮರಾಠಿಗರ ಮೇಲೆ ಆಗುತ್ತಿರುವ ಅನ್ಯಾಯ ತಡೆಯಬೇಕು’ ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>ಮಾಜಿ ಶಾಸಕ ಮನೋಹರ ಕಿಣೇಕರ, ‘ಗಡಿಯಲ್ಲಿ ಮರಾಠಿಗರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ಕಳೆದ 10 ವರ್ಷಗಳಲ್ಲಿ ಒಮ್ಮೆಯೂ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿ ಕರೆದೊಯ್ದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗಡಿಯಲ್ಲಿರುವ ಮರಾಠಿಗರನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷಿಸುತ್ತಿದೆ. ಹಾಗಾಗಿ ಮರಾಠಿ ಭಾಷಿಕ ಯುವಕರು ಬೀದಿಗೆ ಬಂದು, ನಮ್ಮ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು’ ಎಂದರು.</p>.<p>ಮುಖಂಡರಾದ ಮಾಲೋಜಿರಾವ್ ಅಷ್ಟೇಕರ, ಪ್ರಕಾಶ ಮರಗಾಳೆ, ಪ್ರಕಾಶ ಶಿರೋಳಕರ, ಶುಭಂ ಶೆಳಕೆ, ರೇಣು ಕಿಲ್ಲೇಕರ, ರಮಾಕಾಂತ ಕೊಂಡೂಸ್ಕರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 1986ರ ಜೂನ್ 1ರಂದು ಮಹಾರಾಷ್ಟ್ರದ ನಾಯಕರು ಆರಂಭಿಸಿದ ಗಡಿ ಚಳವಳಿ ಕಾಲಕ್ಕೆ ಸಂಭವಿಸಿದ ಹಿಂಸಾಚಾರದಲ್ಲಿ, ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಮೃತಪಟ್ಟ 9 ಮಂದಿಗೆ ತಾಲ್ಲೂಕಿನ ಹಿಂಡಲಗಾದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವತಿಯಿಂದ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>‘ಸುಪ್ರೀಂ ಕೋರ್ಟ್ನಲ್ಲಿ ಇರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದವನ್ನು ಬೇಗ ಇತ್ಯರ್ಥಪಡಿಸಲು ಮಹಾರಾಷ್ಟ್ರ ಸರ್ಕಾರ ಕ್ರಮ ವಹಿಸಬೇಕು. ಗಡಿಯಲ್ಲಿ ಮರಾಠಿಗರ ಮೇಲೆ ಆಗುತ್ತಿರುವ ಅನ್ಯಾಯ ತಡೆಯಬೇಕು’ ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>ಮಾಜಿ ಶಾಸಕ ಮನೋಹರ ಕಿಣೇಕರ, ‘ಗಡಿಯಲ್ಲಿ ಮರಾಠಿಗರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ಕಳೆದ 10 ವರ್ಷಗಳಲ್ಲಿ ಒಮ್ಮೆಯೂ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿ ಕರೆದೊಯ್ದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಗಡಿಯಲ್ಲಿರುವ ಮರಾಠಿಗರನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷಿಸುತ್ತಿದೆ. ಹಾಗಾಗಿ ಮರಾಠಿ ಭಾಷಿಕ ಯುವಕರು ಬೀದಿಗೆ ಬಂದು, ನಮ್ಮ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು’ ಎಂದರು.</p>.<p>ಮುಖಂಡರಾದ ಮಾಲೋಜಿರಾವ್ ಅಷ್ಟೇಕರ, ಪ್ರಕಾಶ ಮರಗಾಳೆ, ಪ್ರಕಾಶ ಶಿರೋಳಕರ, ಶುಭಂ ಶೆಳಕೆ, ರೇಣು ಕಿಲ್ಲೇಕರ, ರಮಾಕಾಂತ ಕೊಂಡೂಸ್ಕರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>