<p><strong>ಬೆಳಗಾವಿ:</strong>ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಸದಸ್ಯರ ವಿರುದ್ಧ ಗಂಭೀರ ಆರೋಪ ಮಾಡಿರುವ ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಘಟನೆಯ ಕಾರ್ಯಕರ್ತರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.</p>.<p>‘ರಕ್ಕಸಕೊಪ್ಪ ಜಲಾಶಯದಲ್ಲಿ ವಿಷ ಬೆರೆಸಿ ಕನ್ನಡಿಗರನ್ನು ಕೊಲೆ ಮಾಡಲು ಎಂಇಎಸ್ ಕಾರ್ಯಕರ್ತರು ಯತ್ನಿಸಿದ್ದರು ಎಂದು ಭೀಮಾಶಂಕರ ಪಾಟೀಲ ಯಾವುದೇ ಆಧಾರವಿಲ್ಲದೇ ಆರೋಪಿಸಿದ್ದಾರೆ. ಈ ರೀತಿ ಹೇಳುವ ಮೂಲಕ ಗಡಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ ಠಾಕ್ರೆ ಹೇಳಿಕೆ ನೀಡಿರುವುದು ರಾಜಕೀಯ ಉದ್ದೇಶದ ಹೇಳಿಕೆ. ಅದಕ್ಕೂ ಸಮಿತಿಗೂ ಯಾವುದೇ ಸಂಬಂಧವಿಲ್ಲ’ ಎಂದು ಅಧ್ಯಕ್ಷ ದೀಪಕ ದಳವಿ ಹೇಳಿದರು.</p>.<p>’ಮಹಾರಾಷ್ಟ್ರ– ಕರ್ನಾಟಕ ಗಡಿ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಅದಕ್ಕಾಗಿ ಎಂಇಎಸ್ನವರುಯಾವುದೇ ರೀತಿ ಹೇಳಿಕೆ ನೀಡುತ್ತಿಲ್ಲ. ಆದರೆಕನ್ನಡ ಪರ ಹೋರಾಟಗಾರರು ನೀಡುತ್ತಿರುವ ವಿವಾದಾತ್ಮಕ ಹೇಳಿಕೆಯಿಂದ ಅಕ್ಕ– ಪಕ್ಕದ ರಾಜ್ಯಗಳಲ್ಲಿ ಶಾಂತಿ ಕದಡುತ್ತಿದೆ’ ಎಂದು ಆರೋಪಿಸಿದರು.</p>.<p><strong>ಮಾತಿನ ಚಕಮಕಿ: </strong>ಕನ್ನಡ ಮಾಧ್ಯಮದವರು ಕೇಳುವ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ಹೇಳಿದ್ದರಿಂದ ಕೆಲಕಾಲ ಪತ್ರಕರ್ತರು ಹಾಗೂ ದೀಪಕ ದಳವಿ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಮುಖಂಡರಾದ ಮನೋಹರ ಕಿಣೇಕರ, ಅರವಿಂದಪಾಟೀಲ,ಮಾಳೋಜಿ ಅಸ್ಟೇಕರ, ಪ್ರಕಾಶ ಶಿರೋಳಕರ, ಬಂಡು ಕೇರವಾಡಕರ, ಸರಸ್ವತಿ ಪಾಟೀಲ, ರಾಜು ಮೊರವೆ, ರಂಜೀತ ಪಾಟೀಲ ಇತರರು ಇದ್ದರು.</p>.<p>ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಪೊಲೀಸ್ ಆಯುಕ್ತ ಕಚೇರಿಗೆ ತೆರಳಿ ಡಿಸಿಪಿ ಸೀಮಾ ಲಾಟ್ಕರ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong>ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಸದಸ್ಯರ ವಿರುದ್ಧ ಗಂಭೀರ ಆರೋಪ ಮಾಡಿರುವ ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಘಟನೆಯ ಕಾರ್ಯಕರ್ತರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.</p>.<p>‘ರಕ್ಕಸಕೊಪ್ಪ ಜಲಾಶಯದಲ್ಲಿ ವಿಷ ಬೆರೆಸಿ ಕನ್ನಡಿಗರನ್ನು ಕೊಲೆ ಮಾಡಲು ಎಂಇಎಸ್ ಕಾರ್ಯಕರ್ತರು ಯತ್ನಿಸಿದ್ದರು ಎಂದು ಭೀಮಾಶಂಕರ ಪಾಟೀಲ ಯಾವುದೇ ಆಧಾರವಿಲ್ಲದೇ ಆರೋಪಿಸಿದ್ದಾರೆ. ಈ ರೀತಿ ಹೇಳುವ ಮೂಲಕ ಗಡಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ ಠಾಕ್ರೆ ಹೇಳಿಕೆ ನೀಡಿರುವುದು ರಾಜಕೀಯ ಉದ್ದೇಶದ ಹೇಳಿಕೆ. ಅದಕ್ಕೂ ಸಮಿತಿಗೂ ಯಾವುದೇ ಸಂಬಂಧವಿಲ್ಲ’ ಎಂದು ಅಧ್ಯಕ್ಷ ದೀಪಕ ದಳವಿ ಹೇಳಿದರು.</p>.<p>’ಮಹಾರಾಷ್ಟ್ರ– ಕರ್ನಾಟಕ ಗಡಿ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಅದಕ್ಕಾಗಿ ಎಂಇಎಸ್ನವರುಯಾವುದೇ ರೀತಿ ಹೇಳಿಕೆ ನೀಡುತ್ತಿಲ್ಲ. ಆದರೆಕನ್ನಡ ಪರ ಹೋರಾಟಗಾರರು ನೀಡುತ್ತಿರುವ ವಿವಾದಾತ್ಮಕ ಹೇಳಿಕೆಯಿಂದ ಅಕ್ಕ– ಪಕ್ಕದ ರಾಜ್ಯಗಳಲ್ಲಿ ಶಾಂತಿ ಕದಡುತ್ತಿದೆ’ ಎಂದು ಆರೋಪಿಸಿದರು.</p>.<p><strong>ಮಾತಿನ ಚಕಮಕಿ: </strong>ಕನ್ನಡ ಮಾಧ್ಯಮದವರು ಕೇಳುವ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ಹೇಳಿದ್ದರಿಂದ ಕೆಲಕಾಲ ಪತ್ರಕರ್ತರು ಹಾಗೂ ದೀಪಕ ದಳವಿ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಮುಖಂಡರಾದ ಮನೋಹರ ಕಿಣೇಕರ, ಅರವಿಂದಪಾಟೀಲ,ಮಾಳೋಜಿ ಅಸ್ಟೇಕರ, ಪ್ರಕಾಶ ಶಿರೋಳಕರ, ಬಂಡು ಕೇರವಾಡಕರ, ಸರಸ್ವತಿ ಪಾಟೀಲ, ರಾಜು ಮೊರವೆ, ರಂಜೀತ ಪಾಟೀಲ ಇತರರು ಇದ್ದರು.</p>.<p>ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಪೊಲೀಸ್ ಆಯುಕ್ತ ಕಚೇರಿಗೆ ತೆರಳಿ ಡಿಸಿಪಿ ಸೀಮಾ ಲಾಟ್ಕರ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>