ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪಾಲಿಕೆ ಎದುರು ಕನ್ನಡ ಬಾವುಟವನ್ನು ಅಕ್ರಮವಾಗಿ ಹಾರಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ನಮ್ಮೊಂದಿಗೆ ಮಾತನಾಡಿದ ಜಿಲ್ಲಾಡಳಿತದ ಅಧಿಕಾರಿಗಳು, ಸಮಯ ಕೇಳಿದ್ದರು. ಆದರೆ ಇದುವರೆಗೂ ನಮಗೆ ನ್ಯಾಯ ಒದಗಿಸಿಲ್ಲ. ಮುಂದೆ ಚುನಾವಣೆ ಘೋಷಣೆಯಾದರೆ ನಮಗೆ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ಸಿಗುವುದಿಲ್ಲ. ಆದ್ದರಿಂದ ಎಲ್ಲ ಮರಾಠಿ ಪರ ಸಂಘಟನೆಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕನ್ನಡ ಧ್ವಜ ತೆರವುಗೊಳಿಸದಿದ್ದರೆ ಮಾರ್ಚ್ 8ರಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.