ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 4 ದಿನಗಳಿಂದ ಪಾಸಿಟಿವಿಟಿ ದರ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲೂ ಆ ಪ್ರಮಾಣ ಏರಿಕೆಯಾಗಿದೆ. ಗೋಕಾಕ, ಅಥಣಿ, ಚಿಕ್ಕೋಡಿ ಭಾಗದಲ್ಲಿ ಹೆಚ್ಚುತ್ತಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರು ಹೆಚ್ಚುತ್ತಿದ್ದಾರೆ. ಒಳ್ಳೆಯ ವಾತಾವರಣದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಜನರು ಆತಂಕಕ್ಕೆ ಒಳಗಾಗದೆ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೋವಿಡ್ ಕೇರ್ ಕೇಂದ್ರಗಳಿಗೆ ಸೇರಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಕೋರಿದರು.