<p><strong>ಬೆಳಗಾವಿ:</strong> ‘ಜಿಲ್ಲೆಯ 321 ಹಳ್ಳಿಗಳಲ್ಲಿ 25ಕ್ಕೂ ಹೆಚ್ಚು ಕೋವಿಡ್–19 ಪ್ರಕರಣಗಳು ದೃಢಪಟ್ಟಿರುವುದನ್ನು ಗುರುತಿಸಲಾಗಿದೆ. ಗ್ರಾಮೀಣ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸಮೀಪದ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು’ ಎಂದು ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 4 ದಿನಗಳಿಂದ ಪಾಸಿಟಿವಿಟಿ ದರ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲೂ ಆ ಪ್ರಮಾಣ ಏರಿಕೆಯಾಗಿದೆ. ಗೋಕಾಕ, ಅಥಣಿ, ಚಿಕ್ಕೋಡಿ ಭಾಗದಲ್ಲಿ ಹೆಚ್ಚುತ್ತಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರು ಹೆಚ್ಚುತ್ತಿದ್ದಾರೆ. ಒಳ್ಳೆಯ ವಾತಾವರಣದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಜನರು ಆತಂಕಕ್ಕೆ ಒಳಗಾಗದೆ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೋವಿಡ್ ಕೇರ್ ಕೇಂದ್ರಗಳಿಗೆ ಸೇರಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>‘ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ 54 ವೆಂಟಿಲೇಟರ್ ಬಂದಿದ್ದವು. ಈಗ ಬಿಮ್ಸ್ನಲ್ಲಿ ಐಸಿಯು ವಿಭಾಗದಲ್ಲಿ32 ವೆಂಟಿಲೇಟರ್ಗಳನ್ನು ಬಳಸಲಾಗುತ್ತಿದೆ’ ಎಂದರು.</p>.<p>‘ಜಿಲ್ಲೆಯ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಮೊದಲನೇ ಡೋಸ್ ಲಸಿಕೆ ನೀಡುತ್ತಿಲ್ಲ. 2ನೇ ಡೋಸ್ ಮಾತ್ರ ನೀಡುತ್ತಿದ್ದೇವೆ. ಲಸಿಕೆ ಬಂದ ಮೇಲೆ 18ರಿಂದ 44 ವರ್ಷದವರಿಗೆ ಸಿಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲೆಯ 321 ಹಳ್ಳಿಗಳಲ್ಲಿ 25ಕ್ಕೂ ಹೆಚ್ಚು ಕೋವಿಡ್–19 ಪ್ರಕರಣಗಳು ದೃಢಪಟ್ಟಿರುವುದನ್ನು ಗುರುತಿಸಲಾಗಿದೆ. ಗ್ರಾಮೀಣ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸಮೀಪದ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು’ ಎಂದು ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 4 ದಿನಗಳಿಂದ ಪಾಸಿಟಿವಿಟಿ ದರ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲೂ ಆ ಪ್ರಮಾಣ ಏರಿಕೆಯಾಗಿದೆ. ಗೋಕಾಕ, ಅಥಣಿ, ಚಿಕ್ಕೋಡಿ ಭಾಗದಲ್ಲಿ ಹೆಚ್ಚುತ್ತಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರು ಹೆಚ್ಚುತ್ತಿದ್ದಾರೆ. ಒಳ್ಳೆಯ ವಾತಾವರಣದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಜನರು ಆತಂಕಕ್ಕೆ ಒಳಗಾಗದೆ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೋವಿಡ್ ಕೇರ್ ಕೇಂದ್ರಗಳಿಗೆ ಸೇರಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>‘ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ 54 ವೆಂಟಿಲೇಟರ್ ಬಂದಿದ್ದವು. ಈಗ ಬಿಮ್ಸ್ನಲ್ಲಿ ಐಸಿಯು ವಿಭಾಗದಲ್ಲಿ32 ವೆಂಟಿಲೇಟರ್ಗಳನ್ನು ಬಳಸಲಾಗುತ್ತಿದೆ’ ಎಂದರು.</p>.<p>‘ಜಿಲ್ಲೆಯ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಮೊದಲನೇ ಡೋಸ್ ಲಸಿಕೆ ನೀಡುತ್ತಿಲ್ಲ. 2ನೇ ಡೋಸ್ ಮಾತ್ರ ನೀಡುತ್ತಿದ್ದೇವೆ. ಲಸಿಕೆ ಬಂದ ಮೇಲೆ 18ರಿಂದ 44 ವರ್ಷದವರಿಗೆ ಸಿಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>