‘ಬಳ್ಳಾರಿ, ಸಂಡೂರು, ಹೊಸಪೇಟೆ ಮೊದಲಾದ ಕಡೆಗಳಲ್ಲಿ ಎ, ಬಿ, ಸಿ ದರ್ಜೆಗಳ 52ಕ್ಕೂ ಹೆಚ್ಚು ಗಣಿಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಅವುಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಈಗ ಬೆರಳೆಣಿಕೆಯಷ್ಟು ಮಾತ್ರವೇ (ಎ ಹಾಗೂ ಬಿ ದರ್ಜೆಯ) ಗಣಿಗಳಿಗೆ ಅವಕಾಶವಿದೆ. ಈ ಗಣಿಗಾರಿಕೆ ಪ್ರದೇಶಗಳಲ್ಲಿ 25ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರದ ನೀತಿಯಿಂದಾಗಿ ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬಿದ್ದಿವೆ. ಗಣಿಗಾರಿಕೆ ಹೊರತುಪಡಿಸಿ ಬೇರೆ ಕೆಲಸಗಳು ನಮಗೆ ಗೊತ್ತಿಲ್ಲದೇ ಇರುವುದರಿಂದ ಅತಂತ್ರಗೊಂಡಿದ್ದೇವೆ’ ಎಂದು ತಿಳಿಸಿದರು.