ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಾಲ‌ ಅಂಕಲಗಿಗೆ ಸಚಿವ ಗೋವಿಂದ ಕಾರಜೋಳ ಭೇಟಿ: ₹35 ಲಕ್ಷ ಪರಿಹಾರ ಚೆಕ್ ವಿತರಣೆ

Last Updated 7 ಅಕ್ಟೋಬರ್ 2021, 8:00 IST
ಅಕ್ಷರ ಗಾತ್ರ

ಬೆಳಗಾವಿ: ಮನೆ ಗೋಡೆ ಕುಸಿದು 7 ಮಂದಿ ಸಾವಿಗೀಡಾದ ತಾಲ್ಲೂಕಿನ ಬಡಾಲ‌ ಅಂಕಲಗಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದ್ದಾರೆ.

ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿಪರಿಹಾರದಂತೆ ಒಟ್ಟು₹ 35 ಲಕ್ಷ ಪರಿಹಾರ ಚೆಕ್ ವಿತರಿಸಿದರು.

ಮನೆ‌ ಬಿದ್ದು ಏಳು ಮಂದಿ ಸಾವಿಗೀಡಾಗಿರುವುದು ನೋವಿನ ಸಂಗತಿ. ಆ ನಷ್ಟ ತುಂಬಿಕೊಡಲು ಆಗುವುದಿಲ್ಲ. ತಲಾ ₹ 5 ಲಕ್ಷದಂತೆ ಪರಿಹಾರ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದತಲಾ ₹ 2 ಲಕ್ಷ ಮಂಜೂರು ಮಾಡಿದ್ದಾರೆ ಎಂದರು.

ಇನ್ನು ಇಬ್ಬರು ಮಕ್ಕಳಿಗೆ ತಲಾ ₹ 1 ಲಕ್ಷವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ನೀಡಲಾಗುವುದು. ಆ ಕುಟುಂಬದವರ ನೋವಿನೊಂದಿಗೆ ಇಡೀ ಸರ್ಕಾರ ಜೊತೆಗಿರಲಿದೆ ಎಂದರು.

ಇದೇವೇಳೆ,ದುಃಸ್ಥಿತಿಯಲ್ಲಿರುವ ಮನೆಗಳ ಸಮೀಕ್ಷೆ ನಡೆಸಿ, ಆ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇ‌ನೆ. ಸತ್ತ ಮೇಲೆ ಪರಿಹಾರ ಕೊಡುವುದಕ್ಕಿಂತ ಪ್ರಾಣ ಉಳಿಸಿಕೊಳ್ಳಲು ಆದ್ಯತೆ ನೀಡಬೇಕಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT