<p><strong>ಬೆಳಗಾವಿ:</strong> ಕಳೆದ ಮಳೆಗಾಲದಲ್ಲಿ ಉಕ್ಕಿಹರಿದು ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ತೀವ್ರ ಹಾನಿಯುಂಟು ಮಾಡಿದ್ದ ಬಳ್ಳಾರಿ ನಾಲೆಯನ್ನು (ದೊಡ್ಡ ಚರಂಡಿ) ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ಪರಿಶೀಲಿಸಿದರು.</p>.<p>‘ಬಳ್ಳಾರಿ, ಲೇಂಡಿ ಹಾಗೂ ನಾಗಝರಿ ನಾಲಾಗಳ ಎರಡೂ ಬದಿಯಲ್ಲಿರುವ ತ್ಯಾಜ್ಯ ಮತ್ತು ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು. ಅಗತ್ಯವಿರುವಲ್ಲಿ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸಬೇಕು’ ಎಂದು ನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p>.<p>‘ತ್ಯಾಜ್ಯ ತೆರವುಗೊಳಿಸದಿರುವುದು, ಅತಿಕ್ರಮಣ ಆಗಿರುವುದು ಹಾಗೂ ತಡೆಗೋಡೆ ನಿರ್ಮಿಸದಿರುವುದರಿಂದ ನಾಲೆಯಲ್ಲಿ ಹಿಂದಿನ ಮಳೆಗಾಲದಲ್ಲಿ ನೀರು ಉಕ್ಕಿ ಹರಿದು ಅಪಾರ ಹಾನಿಯಾಗಿತ್ತು. ಅತಿಕ್ರಮಣ ತೆರವು ಮತ್ತು ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಅಭಯ ಪಾಟೀಲ ಒತ್ತಾಯಿಸಿದರು.</p>.<p>‘ನಾಲಾಗಳ ಎರಡೂ ಬದಿಯಲ್ಲಿ ಭದ್ರವಾದ ಕಾಂಕ್ರೀಟ್ ತಡೆಗೋಡೆ ನಿರ್ಮಿಸಬೇಕು. ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು’ ಎಂದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘ಗುಜರಾತ್ನ ಕೆಲವು ಕಡೆಗಳಲ್ಲಿ ನಾಲಾಗಳ ಮೇಲೆ ಹಾಗೂ ಅಕ್ಕಪಕ್ಕದಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಲಾಗಿದೆ. ಆ ಮಾದರಿಯನ್ನು ಬಳ್ಳಾರಿ ನಾಲಾದಲ್ಲೂ ಅನುಷ್ಠಾನಗೊಳಿಸಬೇಕು’ ಎಂದು ಸಲಹೆ ನೀಡಿದರು.</p>.<p>ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ‘ಬಳ್ಳಾರಿ ನಾಲಾ ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಡಲಾಗುತ್ತಿದೆ’ ಎಂದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕಳೆದ ಮಳೆಗಾಲದಲ್ಲಿ ಉಕ್ಕಿಹರಿದು ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ತೀವ್ರ ಹಾನಿಯುಂಟು ಮಾಡಿದ್ದ ಬಳ್ಳಾರಿ ನಾಲೆಯನ್ನು (ದೊಡ್ಡ ಚರಂಡಿ) ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ಪರಿಶೀಲಿಸಿದರು.</p>.<p>‘ಬಳ್ಳಾರಿ, ಲೇಂಡಿ ಹಾಗೂ ನಾಗಝರಿ ನಾಲಾಗಳ ಎರಡೂ ಬದಿಯಲ್ಲಿರುವ ತ್ಯಾಜ್ಯ ಮತ್ತು ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು. ಅಗತ್ಯವಿರುವಲ್ಲಿ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸಬೇಕು’ ಎಂದು ನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p>.<p>‘ತ್ಯಾಜ್ಯ ತೆರವುಗೊಳಿಸದಿರುವುದು, ಅತಿಕ್ರಮಣ ಆಗಿರುವುದು ಹಾಗೂ ತಡೆಗೋಡೆ ನಿರ್ಮಿಸದಿರುವುದರಿಂದ ನಾಲೆಯಲ್ಲಿ ಹಿಂದಿನ ಮಳೆಗಾಲದಲ್ಲಿ ನೀರು ಉಕ್ಕಿ ಹರಿದು ಅಪಾರ ಹಾನಿಯಾಗಿತ್ತು. ಅತಿಕ್ರಮಣ ತೆರವು ಮತ್ತು ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಅಭಯ ಪಾಟೀಲ ಒತ್ತಾಯಿಸಿದರು.</p>.<p>‘ನಾಲಾಗಳ ಎರಡೂ ಬದಿಯಲ್ಲಿ ಭದ್ರವಾದ ಕಾಂಕ್ರೀಟ್ ತಡೆಗೋಡೆ ನಿರ್ಮಿಸಬೇಕು. ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು’ ಎಂದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘ಗುಜರಾತ್ನ ಕೆಲವು ಕಡೆಗಳಲ್ಲಿ ನಾಲಾಗಳ ಮೇಲೆ ಹಾಗೂ ಅಕ್ಕಪಕ್ಕದಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಲಾಗಿದೆ. ಆ ಮಾದರಿಯನ್ನು ಬಳ್ಳಾರಿ ನಾಲಾದಲ್ಲೂ ಅನುಷ್ಠಾನಗೊಳಿಸಬೇಕು’ ಎಂದು ಸಲಹೆ ನೀಡಿದರು.</p>.<p>ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ‘ಬಳ್ಳಾರಿ ನಾಲಾ ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಡಲಾಗುತ್ತಿದೆ’ ಎಂದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>