<p><strong>ಬೆಳಗಾವಿ</strong>: ಇಲ್ಲಿನ ವಡಗಾವಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಲಿಕಾ ಚೇತರಿಕೆ’ ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಶೇಂಗಾ ಚಕ್ಕೆ ಮತ್ತು ಬಾಳೆಹಣ್ಣು ಸೇವಿಸುತ್ತಿರುವವರ ಮಾಹಿತಿ ಪಡೆದುಕೊಂಡರು.</p>.<p>ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ತರಗತಿಗೆ ಹಾಜರಾಗಿರಲಿಲ್ಲ. ಆದರೆ, ಪುಸ್ತಕದಲ್ಲಿ ಹಾಜರಾತಿ ದಾಖಲಿಸಿರುವುದು ಸಚಿವರ ಗಮನಕ್ಕೆ ಬಂತು. ‘ನಿಖರವಾಗಿ ಹಾಜರಾತಿ ದಾಖಲಿಸಬೇಕು. ಇಂತಹ ತಪ್ಪುಗಳು ಮರುಕಳಿಸಬಾರದು’ ಎಂದು ಶಿಕ್ಷಕಿಗೆ ಸೂಚನೆ ನೀಡಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗೀಯ ಕಚೇರಿ ಅಪರ ಆಯುಕ್ತ ಎಸ್.ಎಸ್. ಬಿರಾದಾರ, ಡಿಡಿಪಿಐ ಬಸವರಾಜ ನಾಲತವಾಡ, ಬಿಇಒ ವೈ.ಜೆ.ಭಜಂತ್ರಿ ಇತರರಿದ್ದರು. ಬಳಿಕ, ಇದೇ ಶಾಲೆ ಆವರಣದಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ಸಚಿವರು ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ಭೂತರಾಮನಹಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಪರಿಣಾಮಕಾರಿಯಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಶಿಕ್ಷಕರು ಕೈಗೊಂಡ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ವಡಗಾವಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಲಿಕಾ ಚೇತರಿಕೆ’ ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಶೇಂಗಾ ಚಕ್ಕೆ ಮತ್ತು ಬಾಳೆಹಣ್ಣು ಸೇವಿಸುತ್ತಿರುವವರ ಮಾಹಿತಿ ಪಡೆದುಕೊಂಡರು.</p>.<p>ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ತರಗತಿಗೆ ಹಾಜರಾಗಿರಲಿಲ್ಲ. ಆದರೆ, ಪುಸ್ತಕದಲ್ಲಿ ಹಾಜರಾತಿ ದಾಖಲಿಸಿರುವುದು ಸಚಿವರ ಗಮನಕ್ಕೆ ಬಂತು. ‘ನಿಖರವಾಗಿ ಹಾಜರಾತಿ ದಾಖಲಿಸಬೇಕು. ಇಂತಹ ತಪ್ಪುಗಳು ಮರುಕಳಿಸಬಾರದು’ ಎಂದು ಶಿಕ್ಷಕಿಗೆ ಸೂಚನೆ ನೀಡಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗೀಯ ಕಚೇರಿ ಅಪರ ಆಯುಕ್ತ ಎಸ್.ಎಸ್. ಬಿರಾದಾರ, ಡಿಡಿಪಿಐ ಬಸವರಾಜ ನಾಲತವಾಡ, ಬಿಇಒ ವೈ.ಜೆ.ಭಜಂತ್ರಿ ಇತರರಿದ್ದರು. ಬಳಿಕ, ಇದೇ ಶಾಲೆ ಆವರಣದಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ಸಚಿವರು ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ಭೂತರಾಮನಹಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಪರಿಣಾಮಕಾರಿಯಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಶಿಕ್ಷಕರು ಕೈಗೊಂಡ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>