ಬೆಂಗಳೂರಿನ ಮನೆಯಲ್ಲಿ ಕೆಲವು ಶಾಸಕರ ಸಭೆ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನ ಮೇಲೆ ಬಿಜೆಪಿ ಶಾಸಕರಿಗೆ ಅಪಾರವಾದ ಗೌರವವಿದೆ. ಈ ಆಧಾರದ ಮೇಲೆ ಅನೇಕ ಶಾಸಕರು ಸೇರಿ ಊಟ ಮಾಡಿದ್ದೇವೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಇಲಾಖೆಯ ಕೆಲವು ಕಾಮಗಾರಿಗಳ ಬಗ್ಗೆ ಚರ್ಚಿಸಲು ಬಂದಿದ್ದರು. ನನ್ನ ಇತಿಮಿತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ನಾವೆಲ್ಲರೂ ಒಂದೇ ಪಕ್ಷದಲ್ಲಿದ್ದೇವೆ. ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ’ ಎಂದು ತಿಳಿಸಿದರು.