ಅವಿರೋಧ ಆಯ್ಕೆಗೆ ಆರ್ಎಸ್ಎಸ್ ನಾಯಕರು ಸಲಹೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಆ ಸಭೆಯಲ್ಲಿ ನಾನಿರಲಿಲ್ಲ. ಮುಖಂಡ ಅರವಿಂದರಾವ್ ದೇಶಪಾಂಡೆ ನಮ್ಮ ಮಾರ್ಗದರ್ಶಕರಾಗಿ ಹೇಳಿದ್ದಾರೆ. ಎಲ್ಲರೂ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸಹಕಾರ ರಂಗದಲ್ಲಿ ಪಕ್ಷ ಬರುವುದಿಲ್ಲ. 20 ವರ್ಷಗಳಿಂದ ಡಿಸಿಸಿ ಬ್ಯಾಂಕ್ನಲ್ಲಿ ಎಲ್ಲಾ ಪಕ್ಷದವರೂ ನಿರ್ದೇಶಕರಾಗಿದ್ದಾರೆ. ಈಗಿನ ಚುನಾವಣೆ ವಿಷಯದಲ್ಲಿ ಶಾಸಕರಾದ ಉಮೇಶ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೊಳಿ ಕೈಗೊಳ್ಳುವ ನಿರ್ಣಯಕ್ಕೆ ಬದ್ಧವಾಗಿದ್ದೇನೆ. ಅವರು ಹೇಳಿದ ಪ್ರಕಾರ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.