‘ಈಗಾಗಲೇ ಯಾರಾದಾರೂ ಸೇವಾ ಶುಲ್ಕ ಪಾವತಿಸಿದ್ದಲ್ಲಿ ಮುಂದಿನ ವರ್ಷದಲ್ಲಿ ಅದನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಆಡಳಿತಾಧಿಕಾರಿ ಅನುಮೋದಿಸಿದ್ದಾರೆ. ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದೆ ಹಾಗೂ ಲಾಕ್ಡೌನ್ ಜಾರಿಯಿಂದ ಸಾರ್ವಜನಿಕರಿಗೆ ಸೇವಾ ಶುಲ್ಕ ಭರಿಸಲು ತೊಂದರೆ ಆಗುತ್ತಿದೆ ಎನ್ನುವುದನ್ನು ಮನಗಂಡು ಜಿಲ್ಲಾ ಉಸ್ತುವಾರಿ ಸಚಿವರು, ರೈಲ್ವೆ ಖಾತೆ ರಾಜ್ಯ ಸಚಿವರ ನಿರ್ದೇಶನಂತೆ ಶಾಸಕರು ಹಾಗೂ ಜನಪ್ರತಿನಿಧಿಗಳ ಕೋರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.