ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ– ಧಾರವಾಡ ರೈಲು ಮಾರ್ಗ ಕಾಮಗಾರಿ ಆರಂಭಿಸಲು ಸಚಿವ ಸತೀಶ ಜಾರಕಿಹೊಳಿ ತಾಕೀತು

Published : 2 ಮಾರ್ಚ್ 2024, 5:34 IST
Last Updated : 2 ಮಾರ್ಚ್ 2024, 5:34 IST
ಫಾಲೋ ಮಾಡಿ
Comments
ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೆತ್ತಿಕೊಂಡ ವಸತಿ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ
ಆಸೀಫ್‌ ಸೇಠ್‌ ಶಾಸಕ
ನವಿಲುತೀರ್ಥ ಜಲಾಶಯದಿಂದ ಮಲಪ್ರಭೆಗೆ ಹೆಚ್ಚಿನ ನೀರು ಬಿಡಬೇಡಿ. ಇದರಿಂದ ಸವದತ್ತಿ ಚನ್ನಮ್ಮನ ಕಿತ್ತೂರು ಬೈಲಹೊಂಗಲ ತಾಲ್ಲೂಕಿಗೆ ಸಮಸ್ಯೆಯಾಗಬಹುದು
ಮಹಾಂತೇಶ ಕೌಜಲಗಿ ಶಾಸಕ
‘ಭೂತ ಬಂಗಲೆಯಾಗದಿರಲಿ ಆಸ್ಪತ್ರೆ’
‘ಜಿಲ್ಲೆಯಲ್ಲಿ ಐದಾರು ವರ್ಷಗಳ ಹಿಂದೆಯೇ ನಿರ್ಮಾಣವಾದ ಹಲವು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಣ್ಣ–ಪುಟ್ಟ ಕಾರಣಕ್ಕೆ ಅವು ಬಳಕೆಯಾಗುತ್ತಿಲ್ಲ. ಆ ಕಟ್ಟಡಗಳು ಭೂತ ಬಂಗಲೆಯಾಗದಿರಲಿ’ ಎಂದು ಈರಣ್ಣ ಕಡಾಡಿ ಹೇಳಿದರು. ‘ಇಂತಹ ಆಸ್ಪತ್ರೆಗಳನ್ನು ತ್ವರಿತವಾಗಿ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.
‘ನೀರು: ತಾಲ್ಲೂಕಿಗೆ ತಲಾ ₹1ಕೋಟಿ’
‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಬಾಧೆ ಉಂಟಾಗಬಹುದಾದ 339 ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ 49 ವಾರ್ಡ್‌ಗಳನ್ನು ಗುರುತಿಸಿದ್ದೇವೆ. 10 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 12 ಟ್ಯಾಂಕರ್‌ ಮೂಲಕ ನಿತ್ಯ 26 ಟ್ರಿಪ್‌ ನೀರು ಪೂರೈಸುತ್ತಿದ್ದೇವೆ. ಬೈಲಹೊಂಗಲ ತಾಲ್ಲೂಕಿನ 7 ಹಳ್ಳಿಗಳಿಗೆ ಖಾಸಗಿ ಕೊಳವೆಬಾವಿ ಮೂಲಕ ಪೂರೈಕೆಯಾಗುತ್ತಿದೆ. ನೀರಿನ ಸಮಸ್ಯೆ ನಿರ್ವಹಣೆಗಾಗಿಯೇ ಪ್ರತಿ ತಾಲ್ಲೂಕಿಗೆ ತಲಾ ₹1 ಕೋಟಿ ಅನುದಾನ ಮೀಸಲಿಡಲಾಗಿದೆ. ಎಲ್ಲಿಯೂ ಅನುದಾನದ ಕೊರತೆ ಇಲ್ಲ’ ಎಂದು ಡಿ.ಸಿ ನಿತೇಶ್‌ ಪಾಟೀಲ ವಿವರಿಸಿದರು. ‘ಪರಿಸ್ಥಿತಿ ಅರ್ಥೈಸಿಕೊಂಡು ನೀರು ಮೇವು ಮತ್ತು ವಿದ್ಯುತ್ ಅಭಾವ ಆಗದಂತೆ ಕ್ರಮ ತೆಗೆದುಕೊಳ್ಳಿ’ ಎಂದು ಸಚಿವ ನಿರ್ದೇಶನ ನೀಡಿದರು. ‘ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಸ್ವಂತ ಟ್ಯಾಂಕರ್ ಖರೀದಿಗೆ ಸೂಚಿಸಲಾಗಿತ್ತು. ಆದರೆ ಈವರೆಗೆ 280 ಗ್ರಾಮ ಪಂಚಾಯ್ತಿಗಳಲ್ಲಿ ಖರೀದಿ ಪ್ರಕ್ರಿಯೆ ನಡೆದಿದೆ. ಉಳಿದ ಪಂಚಾಯ್ತಿಯವರು ಶೀಘ್ರ ಟ್ಯಾಂಕರ್ ಖರೀದಿಸಿದರೆ ಬೇಸಿಗೆಯಲ್ಲಿ ತುರ್ತಾಗಿ ನೀರು ಪೂರೈಸಬಹುದು. ಜಲಬವಣೆ ಇರುವಲ್ಲಿ ಹೊಸ ಕೊಳವೆಬಾವಿ ಕೊರೆಯಿಸುವುದಕ್ಕಿಂತ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮ ವಹಿಸಿ’ ಎಂದು ಹೇಳಿದರು.
ಬೆಳೆಹಾನಿ ಪರಿಹಾರ - ಅಂಕಿ ಅಂಶ
3.72 ಲಕ್ಷ ಪರಿಹಾರಕ್ಕೆ ನೋಂದಣಿ ಮಾಡಿದ ರೈತರ ಸಂಖ್ಯೆ 3.45 ಲಕ್ಷ ಬೆಳೆಹಾನಿ ಸಂದಾಯವಾದ ರೈತರ ಸಂಖ್ಯೆ ₹64.19 ಕೋಟಿ ಈವರೆಗೆ ಸಂದಾಯವಾದ ಹಣ 21 ಸಾವಿರ ಇನ್ನೂ ಪರಿಹಾರ ಬಾಕಿ ಉಳಿದ ರೈತರ ಸಂಖ್ಯೆ
ಮತ್ತೊಂದು ಕ್ರೀಡಾ ಹಾಸ್ಟೆಲ್‌ಗೆ ಪ್ರಸ್ತಾವ ಸಲ್ಲಿಸಿ
‘ಹೆಚ್ಚಿನ ಜನಸಂಖ್ಯೆ ಹೊಂದಿದ ಜಿಲ್ಲೆಯಲ್ಲಿ ಮತ್ತೊಂದು ಕ್ರೀಡಾ ಹಾಸ್ಟೆಲ್‌ಗೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು. ಈಗ ಬೆಳಗಾವಿಯ ಕ್ರೀಡಾ ಹಾಸ್ಟೆಲ್‌ನಲ್ಲಿ ಎಷ್ಟು ಕ್ರೀಡಾಪಟುಗಳಿದ್ದಾರೆ? ಅವರ ವಿದ್ಯಾರ್ಹತೆ ಏನು? ಊಟದ ಮೆನು ಹೇಗಿದೆ? ಎಂದು ವಿವರ ಪಡೆದುಕೊಂಡ ಅವರು ‘ಬೆಳಗಾವಿಗೆ ಮತ್ತೊಂದು ಕ್ರೀಡಾ ಹಾಸ್ಟೆಲ್‌ ಅಗತ್ಯವಿದೆ. ಚಿಕ್ಕೋಡಿ ಅಥವಾ ಗೋಕಾಕದಲ್ಲಿ ಅದನ್ನು ಆರಂಭಿಸಲು ಪ್ರಸ್ತಾವ ಸಲ್ಲಿಸಿ’ ಎಂದು ನಿರ್ದೇಶನ ನೀಡಿದರು. ‘ನಾನು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಶೀಘ್ರವೇ ಹಾಸ್ಟೆಲ್‌ಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸುತ್ತೇವೆ’ ಎಂದೂ ಹೇಳಿದರು.
‘ಗ್ರಾಮೀಣ ಕ್ಷೇತ್ರದಲ್ಲೇ ಅಡ್ಡಿ’
‘ಬಹು ನಿರೀಕ್ಷಿತ ರೈಲ್ವೆ ಮಾರ್ಗದ ಯೋಜನೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳ ರೈತರೇ ಅಡ್ಡಿಪಡಿಸುತ್ತಿದ್ದಾರೆ’ ಎಂದು ಸಂಸದೆ ಮಂಗಲಾ ಅಂಗಡಿ ತಕರಾರು ತೆಗೆದರು. ‘ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಯೋಜನೆ ಆರಂಭಿಸಲು ಅನುಕೂಲವಾಗುವಂತೆ ಸಮೀಕ್ಷೆ ಮತ್ತು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದೂ ಸೂಚಿಸಿದರು. ಈ ವೇಳೆ ಮಾತನಾಡಿದ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ‘ಕಾಮಗಾರಿ ವಿಳಂಬವಾಗುತ್ತಿರುವ ಕಾರಣ ಯೋಜನಾ ವೆಚ್ಚ ಹೆಚ್ಚುತ್ತಿದೆ. ಈಗ ಮತ್ತೆ ನಾವು ರೈಲ್ವೆ ಮಂಡಳಿ ಸಂಪರ್ಕಿಸಬೇಕಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT