ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ವಯಸ್ಸಿನ ವಿದ್ಯಾರ್ಥಿಗಳಿಗೆ ತಿಳಿವಳಿಕೆ ಇರುವುದರಿಂದ ಸಮಸ್ಯೆ ಉದ್ಭವಿಸುವುದಿಲ್ಲ. ಕೋವಿಡ್–19 ಸಂಕಷ್ಟದ ಸಮಯವಾದ್ದರಿಂದಾಗಿ ಪರೀಕ್ಷೆ ನಡೆಸುವ ಪೂರ್ವದಲ್ಲಿ ಶಿಕ್ಷಣ ಇಲಾಖೆಯು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಶಿಕ್ಷಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.