ಅವರ ಅಹವಾಲುಗಳನ್ನು ಆಲಿಸಿದ ಅವರು, ‘ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆ ಕಾರಣಕ್ಕಾಗಿ ವಲಸೆ ಕಾರ್ಮಿಕರ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಅಯಾ ರಾಜ್ಯ ಹಾಗೂ ಜಿಲ್ಲೆಗಳಲ್ಲಿಯೇ ಅವರಿಗೆ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ. ಲಾಕ್ಡೌನ್ ಮುಗಿಯುವವರೆಗೆ ಅಧಿಕಾರಿಗಳ ಜತೆ ಸಹಕರಿಸಬೇಕು’ ಎಂದು ಹೇಳಿದರು.