<p><strong>ಬೆಳಗಾವಿ</strong>: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬುಧವಾರ, ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.</p>.<p>ಸಚಿವೆಯೊಂದಿಗೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾರ್ಗದರ್ಶನ ಪಡೆದರು. ಇದೇ ಸಮಯದಲ್ಲಿ ಅವರನ್ನು ಸಚಿವರು ಸನ್ಮಾನಿಸಿ, ಅವರ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಿದರು. ನಂತರ ಪ್ರಿಯಾಂಕಾ ಅವರು ಸಚಿವೆ ಕಾಲಿಗೆ ನಮಸ್ಕರಿಸಿದರು.</p>.<p>‘ಪ್ರಿಯಾಂಕಾ ಜಾರಕಿಹೊಳಿ ಅವರು ಅತಿ ಚಿಕ್ಕ ವಯಸ್ಸಿನಲ್ಲಿ ಸಂಸದೆಯಾಗುವ ಮೂಲಕ ಜಿಲ್ಲೆಯ ಹೆಸರನ್ನು ಕೇಂದ್ರದಲ್ಲೂ ಮಿಂಚುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಒಳ್ಳೆಯ ಯಶಸ್ಸು ದೊರೆಯಲಿ’ ಎಂದು ಸಚಿವೆ ಲಕ್ಷ್ಮಿ ಹಾರೈಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ, ರಾಹುಲ್ ಜಾರಕಿಹೊಳಿ, ಯುವರಾಜ ಕದಂ, ಮಲಗೌಡ ಪಾಟೀಲ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬುಧವಾರ, ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.</p>.<p>ಸಚಿವೆಯೊಂದಿಗೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾರ್ಗದರ್ಶನ ಪಡೆದರು. ಇದೇ ಸಮಯದಲ್ಲಿ ಅವರನ್ನು ಸಚಿವರು ಸನ್ಮಾನಿಸಿ, ಅವರ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಿದರು. ನಂತರ ಪ್ರಿಯಾಂಕಾ ಅವರು ಸಚಿವೆ ಕಾಲಿಗೆ ನಮಸ್ಕರಿಸಿದರು.</p>.<p>‘ಪ್ರಿಯಾಂಕಾ ಜಾರಕಿಹೊಳಿ ಅವರು ಅತಿ ಚಿಕ್ಕ ವಯಸ್ಸಿನಲ್ಲಿ ಸಂಸದೆಯಾಗುವ ಮೂಲಕ ಜಿಲ್ಲೆಯ ಹೆಸರನ್ನು ಕೇಂದ್ರದಲ್ಲೂ ಮಿಂಚುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಒಳ್ಳೆಯ ಯಶಸ್ಸು ದೊರೆಯಲಿ’ ಎಂದು ಸಚಿವೆ ಲಕ್ಷ್ಮಿ ಹಾರೈಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ, ರಾಹುಲ್ ಜಾರಕಿಹೊಳಿ, ಯುವರಾಜ ಕದಂ, ಮಲಗೌಡ ಪಾಟೀಲ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>