ಸುಳಗಾ(ಬೆಳಗಾವಿ ತಾಲ್ಲೂಕು): ಹೊಸ ವರ್ಷದ ಮೊದಲ ದಿನವೇ ಕಿಡಿಗೇಡಿಗಳು ಕನ್ನಡ ಧ್ವಜ ಸುಟ್ಟ ಘಟನೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಸುಳಗಾದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದೆ. 'ಓಲ್ಡ್ ಮ್ಯಾನ್' ಪ್ರತಿಕೃತಿ ಸುಟ್ಟ ಬಳಿಕ, ಕನ್ನಡ ಬಾವುಟಕ್ಕೂ ಬೆಂಕಿ ಹಚ್ಚಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆಯನ್ನು ಕನ್ನಡ ಸಂಘಟನೆಗಳು ಖಂಡಿಸಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿವೆ.