ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಸಿಗೆ ಕಲ್ಲೆಸೆದ ಕಿಡಿಗೇಡಿಗಳು

Last Updated 26 ಡಿಸೆಂಬರ್ 2022, 4:11 IST
ಅಕ್ಷರ ಗಾತ್ರ

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನ ಮೇಲೆ, ತಾಲ್ಲೂಕಿನ ಕಣಬರ್ಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜುಗಳು, ಕಿಟಕಿಗಳು ಪುಡಿಯಾಗಿವೆ.

ಬೆಳಗಾವಿಯಿಂದ ಗೋಕಾಕ ತಾಲ್ಲೂಕಿನ ಶೀಗಿಹಳ್ಳಿಗೆ ಬಸ್ ಹೊರಟಿತ್ತು. ಮಾರ್ಗ ಮಧ್ಯೆ ಬಸ್ಸಿಗೆ ಅಡ್ಡಹಾಕಿದ ಕೀಡಿಗೇಡಿಗಳು ಕಲ್ಲು ತೂರಿದರು ಎಂದು ವಾಹನದಲ್ಲಿದ್ದವರು ತಿಳಿಸಿದ್ದಾರೆ.

ಹಾನಿಗೊಳಗಾದ ಬಸ್ಸನ್ನು ಅಧಿಕಾರಿಗಳು ಮೂರನೇ ಡಿಪೊಗೆ ತಂದು ನಿಲ್ಲಿಸಿದರು. ಬಸ್ಸಿನ ಫೋಟೊ, ವಿಡಿಯೊ ದೃಶ್ಯ ಸೆರೆಹಿಡಿಯಲು ಮಾಧ್ಯಮದವರು ತೆರಳಿದಾಗ ಅಧಿಕಾರಿಗಳು ಅವಕಾಶ ನೀಡಲಿಲ್ಲ.

ಕಲ್ಲು ಎಸೆದವರು ಎಂಇಎಸ್‌ನವರು ಎಂಬುದೂ ನಮಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT