ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣದಲ್ಲಿ ಅಭಯ ಪಾಟೀಲ ಪ‍್ರಚಾರ

Last Updated 14 ಏಪ್ರಿಲ್ 2019, 9:26 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರವಾಗಿ ದಕ್ಷಿಣ ಮತಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಭಾನುವಾರ ಮತ ಯಾಚಿಸಿದರು.

‘ಬೆಳಿಗ್ಗೆ 7ರಿಂದ 4ಸಾವಿರ ಕಾರ್ಯಕರ್ತರು ದಕ್ಷಿಣ ಕ್ಷೇತ್ರದಲ್ಲಿ 58ಸಾವಿರ ಮನೆಗಳಿಗೂ ತಲುಪಿ ಬಿಜೆಪಿ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಹಂಚಿದ್ದಾರೆ. 251 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ 15 ಮಂದಿ ಸಂಚರಿಸಿ ಪ್ರಚಾರ ಮಾಡಿದ್ದಾರೆ. ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

‘ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದು ನಿಶ್ಚಿತ. ರಾಜ್ಯದಲ್ಲೂ ಉತ್ತಮ ಫಲಿತಾಂಶ ಬರಲಿದೆ. ಜಿಲ್ಲೆಯಲ್ಲಿ ಪಕ್ಷದವರು ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT