ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ನನ್ನ ಕ್ಷೇತ್ರದಲ್ಲಿರುವಷ್ಟು ಬಿಜೆಪಿ ಕಾರ್ಯಕರ್ತರು ಬೇರಾವ ಕ್ಷೇತ್ರದಲ್ಲೂ ಇಲ್ಲ. ಆದರೆ, ನನಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟಿಸಿಲ್ಲ; ಹೇಳಿಕೆ ಕೊಡಲಿಲ್ಲ. ಶಿಸ್ತು ಪಾಲಿಸಿದ್ದಾರೆ. ಪಕ್ಷ ನಮಗೆ ಬಹಳಷ್ಟು ಕೊಟ್ಟಿದೆ. ಹೀಗಾಗಿ, ಹೈಕಮಾಂಡ್ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ’ ಎಂದರು.