‘ಅಡುಗೆ ಅನಿಲ ಪೈಪ್ಲೈನ್, ಕುಡಿಯುವ ನೀರು ಸರಬರಾಜು, ಸ್ವಚ್ಛತೆಗೆ ಸಂಬಂಧಿಸಿ ಜನರು ಅಹವಾಲು ಸಲ್ಲಿಸಿದ್ದಾರೆ. ಈ ಪೈಕಿ ತುರ್ತು ಅಗತ್ಯವಿರುವ ಕೆಲಸಗಳಿಗೆ ವಾರದೊಳಗೆ ಚಾಲನೆ ನೀಡಲಾಗುವುದು. ಯೋಜನಾ ವರದಿ ಸಿದ್ಧಪಡಿಸಿ, ಸರ್ಕಾರದಿಂದ ಆಡಳಿತಾತ್ಮಕ ಮಂಜೂರಾತಿ ಪಡೆಯಬೇಕಾದ ಕೆಲಸಗಳನ್ನು ಹಂತ–ಹಂತವಾಗಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.