ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಳಿಗೆ ಹಿಡಿದಾದರೂ ಹಣ ಸಂಗ್ರಹಿಸಿ ಕೊಡುವೆ: ಮಹೇಶ ಕುಮಠಳ್ಳಿ

Last Updated 1 ಜುಲೈ 2021, 14:13 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಲ್ಯಾಳ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿ ಸಾವಿಗೀಡಾದ ನಾಲ್ವರು ಸಹೋದರರ ಕುಟುಂಬದವರಿಗೆ ಶಾಸಕ ಮಹೇಶ ಕುಮಠಳ್ಳಿ ಗುರುವಾರ ಸಾಂತ್ವನ ಹೇಳಿದರು.

‘ಸರ್ಕಾರದಿಂದ ಪರಿಹಾರ ಕೊಡಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ತಪ್ಪಿದರೆ ಜೋಳಿಗೆ ಹಿಡಿದು ಹಣ ಸಂಗ್ರಹಿಸಿಯಾದರೂ ಕೊಡುತ್ತೇನೆ’ ಎಂದು ಬಣಸೋಡೆ ಕುಟುಂಬದವರಿಗೆ ಭರವಸೆ ನೀಡಿದರು.

‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ನಾನು ಈ ಬಗ್ಗೆ ಈಗಾಗಲೇ ಚರ್ಚಿಸಿದ್ದೇವೆ. ವೈಯಕ್ತಿಕವಾಗಿಯೂ ಸಹಾಯ ಮಾಡುತ್ತೇನೆ’ ಎಂದು ತಿಳಿಸಿ ಧೈರ್ಯ ತುಂಬಿದರು.

ಇದೇ ವೇಳೆ, ಕುಟುಂಬದವರು ಪರಿಹಾರ ಕೋರಿ ತಹಶೀಲ್ದಾರ್‌ ದುಂಡಪ್ಪ ಕೊಮಾರ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಂ.ಶೇಗುಣಸಿ. ಡಿವೈಎಸ್ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಶಿಂಧೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT