<p><strong>ಬೆಳಗಾವಿ</strong>: ‘ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಚಿಕ್ಕೋಡಿ- ಸದಲಗಾ ಶಾಸಕ ಗಣೇಶ ಹುಕ್ಕೇರಿ ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.</p>.<p>‘ಚಿಕ್ಕೋಡಿಯು ಬೆಳಗಾವಿಯಿಂದ ಸಾಕಷ್ಟು ದೂರದಲ್ಲಿದೆ. ಅಥಣಿ ತಾಲ್ಲೂಕಿನಿಂದ ಬೆಳಗಾವಿಗೆ ಪರೀಕ್ಷೆಗಾಗಿ ಬರುವುದು ಕಷ್ಟವಾಗುತ್ತದೆ. ಚಿಕ್ಕೋಡಿ ತಾಲ್ಲೂಕು ಮಹಾರಾಷ್ಟ್ರ ಗಡಿಯಲ್ಲಿರುವುದರಿಂದ ಹೆಚ್ಚಿನ ಅಪಾಯದಲ್ಲಿದೆ. ಹೀಗಾಗಿ, ಪ್ರಯೋಗಾಲಯ ಅಗತ್ಯವಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.</p>.<p>‘ನನ್ನ ಮನವಿ ಪರಿಗಣಿಸಿ ಮೌಖಿಕ ಒಪ್ಪಿಗೆ ಸೂಚಿಸಿದ್ದಿರಿ. ಆದರೆ, ಕ್ರಮವಾಗಿಲ್ಲ. ಪರಿಸ್ಥಿತಿ ಕೈಮೀರುವ ಮುನ್ನ ತೀರ್ಮಾನ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ’ ಎಂದು ಗಣೇಶ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಚಿಕ್ಕೋಡಿ- ಸದಲಗಾ ಶಾಸಕ ಗಣೇಶ ಹುಕ್ಕೇರಿ ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.</p>.<p>‘ಚಿಕ್ಕೋಡಿಯು ಬೆಳಗಾವಿಯಿಂದ ಸಾಕಷ್ಟು ದೂರದಲ್ಲಿದೆ. ಅಥಣಿ ತಾಲ್ಲೂಕಿನಿಂದ ಬೆಳಗಾವಿಗೆ ಪರೀಕ್ಷೆಗಾಗಿ ಬರುವುದು ಕಷ್ಟವಾಗುತ್ತದೆ. ಚಿಕ್ಕೋಡಿ ತಾಲ್ಲೂಕು ಮಹಾರಾಷ್ಟ್ರ ಗಡಿಯಲ್ಲಿರುವುದರಿಂದ ಹೆಚ್ಚಿನ ಅಪಾಯದಲ್ಲಿದೆ. ಹೀಗಾಗಿ, ಪ್ರಯೋಗಾಲಯ ಅಗತ್ಯವಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.</p>.<p>‘ನನ್ನ ಮನವಿ ಪರಿಗಣಿಸಿ ಮೌಖಿಕ ಒಪ್ಪಿಗೆ ಸೂಚಿಸಿದ್ದಿರಿ. ಆದರೆ, ಕ್ರಮವಾಗಿಲ್ಲ. ಪರಿಸ್ಥಿತಿ ಕೈಮೀರುವ ಮುನ್ನ ತೀರ್ಮಾನ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ’ ಎಂದು ಗಣೇಶ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>