<p><strong>ನಿಪ್ಪಾಣಿ</strong>: ‘ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುದಾನ ತಂದು ಸುಮಾರು 2 ಎಕರೆ ಜಾಗದಲ್ಲಿ 86 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಅವುಗಳಲ್ಲಿ 46 ವಸತಿಗಳು ಪೂರ್ಣಗೊಂಡಿದ್ದು, ಡಾ.ಬಾಬಾಸಾಹೇಬ ಅಂಬೇಡ್ಕರರ ಜನ್ಮದಿನವಾದ ಏ.14ರಂದು ಉದ್ಘಾಟಿಸಿ ಪೌರಕಾರ್ಮಿಕರ ಗೃಹಪ್ರವೇಶಕ್ಕೆ ಅನುವು ಮಾಡಿಕೊಳ್ಳಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ನಗರೋತ್ಥಾನದಡಿ ಪರಿಶಿಷ್ಠ ಜಾತಿಯ ₹1.65 ಕೋಟಿ ಅನುದಾನ, ಪರಿಶಿಷ್ಠ ಪಂಗಡದ ₹70.90 ಲಕ್ಷ ಅನುದಾನ, ಇತರೆ ಬಡಜನರ ಕಲ್ಯಾಣದ ₹92.44 ಲಕ್ಷ ಅನುದಾನ ಹೀಗೆ ಒಟ್ಟು ಸುಮಾರು ₹3.28 ಕೋಟಿಗಳ ವಿವಿಧ ಕಾಮಗಾರಿಗಳಿಗೆ ಅವರು ಚಾಲನೆ ನೀಡಿ ಮಾತನಾಡಿದರು.</p>.<p>‘ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾದ ಮನೆಗಳ ಬಡಾವಣೆಯಲ್ಲಿ ₹52.91 ಲಕ್ಷ ಅನುದಾನದಲ್ಲಿ ಆಂತರಿಕ ರಸ್ತೆ ಮತ್ತು ಚರಂಡಿ ನಿರ್ಮಾಣ, ವಾರ್ಡ್ ನಂ.27ರ ಭೀಮನಗರದಲ್ಲಿ ವಿದ್ಯಾ ಮಂದಿರದಿಂದ ಉರ್ದು ಶಾಲೆಯವರೆಗೆ ₹20 ಲಕ್ಷ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p>.<p>ನಗರಸಭೆ ಅಧ್ಯಕ್ಷೆ ಸೋನಲ್ ಕೊಠಡಿಯಾ, ಉಪಾಧ್ಯಕ್ಷ ಸಂಜಯ ಸಾಂಗಾವಕರ, ಸ್ಥಾಯಿ ಸಮಿತಿ ಚೇರಮನ್ ಡಾ. ಜಸರಾಜ ಗಿರೆ, ಸದಸ್ಯ ರಾಜೇಂದ್ರ ಗುಂದೇಶಾ, ವಿಲಾಸ್ ಗಾಡಿವಡ್ಡರ, ಜಯವಂತ ಭಾಟಲೆ, ಸುರೇಖ ದೇಸಾಯಿ-ಸರ್ಕಾರ, ಸುಜಾತಾ ಕದಮ, ಪ್ರಭಾವತಿ ಸೂರ್ಯವಂಶಿ, ಮಾಜಿ ಉಪಾಧ್ಯಕ್ಷ ಸುನೀಲ ಪಾಟೀಲ, ರಾಜೇಶ ಕೊಠಡಿಯಾ, ಬಂಡಾ ಘೋರ್ಪಡೆ, ಪ್ರಣವ ಮಾನವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ‘ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುದಾನ ತಂದು ಸುಮಾರು 2 ಎಕರೆ ಜಾಗದಲ್ಲಿ 86 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಅವುಗಳಲ್ಲಿ 46 ವಸತಿಗಳು ಪೂರ್ಣಗೊಂಡಿದ್ದು, ಡಾ.ಬಾಬಾಸಾಹೇಬ ಅಂಬೇಡ್ಕರರ ಜನ್ಮದಿನವಾದ ಏ.14ರಂದು ಉದ್ಘಾಟಿಸಿ ಪೌರಕಾರ್ಮಿಕರ ಗೃಹಪ್ರವೇಶಕ್ಕೆ ಅನುವು ಮಾಡಿಕೊಳ್ಳಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ನಗರೋತ್ಥಾನದಡಿ ಪರಿಶಿಷ್ಠ ಜಾತಿಯ ₹1.65 ಕೋಟಿ ಅನುದಾನ, ಪರಿಶಿಷ್ಠ ಪಂಗಡದ ₹70.90 ಲಕ್ಷ ಅನುದಾನ, ಇತರೆ ಬಡಜನರ ಕಲ್ಯಾಣದ ₹92.44 ಲಕ್ಷ ಅನುದಾನ ಹೀಗೆ ಒಟ್ಟು ಸುಮಾರು ₹3.28 ಕೋಟಿಗಳ ವಿವಿಧ ಕಾಮಗಾರಿಗಳಿಗೆ ಅವರು ಚಾಲನೆ ನೀಡಿ ಮಾತನಾಡಿದರು.</p>.<p>‘ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾದ ಮನೆಗಳ ಬಡಾವಣೆಯಲ್ಲಿ ₹52.91 ಲಕ್ಷ ಅನುದಾನದಲ್ಲಿ ಆಂತರಿಕ ರಸ್ತೆ ಮತ್ತು ಚರಂಡಿ ನಿರ್ಮಾಣ, ವಾರ್ಡ್ ನಂ.27ರ ಭೀಮನಗರದಲ್ಲಿ ವಿದ್ಯಾ ಮಂದಿರದಿಂದ ಉರ್ದು ಶಾಲೆಯವರೆಗೆ ₹20 ಲಕ್ಷ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p>.<p>ನಗರಸಭೆ ಅಧ್ಯಕ್ಷೆ ಸೋನಲ್ ಕೊಠಡಿಯಾ, ಉಪಾಧ್ಯಕ್ಷ ಸಂಜಯ ಸಾಂಗಾವಕರ, ಸ್ಥಾಯಿ ಸಮಿತಿ ಚೇರಮನ್ ಡಾ. ಜಸರಾಜ ಗಿರೆ, ಸದಸ್ಯ ರಾಜೇಂದ್ರ ಗುಂದೇಶಾ, ವಿಲಾಸ್ ಗಾಡಿವಡ್ಡರ, ಜಯವಂತ ಭಾಟಲೆ, ಸುರೇಖ ದೇಸಾಯಿ-ಸರ್ಕಾರ, ಸುಜಾತಾ ಕದಮ, ಪ್ರಭಾವತಿ ಸೂರ್ಯವಂಶಿ, ಮಾಜಿ ಉಪಾಧ್ಯಕ್ಷ ಸುನೀಲ ಪಾಟೀಲ, ರಾಜೇಶ ಕೊಠಡಿಯಾ, ಬಂಡಾ ಘೋರ್ಪಡೆ, ಪ್ರಣವ ಮಾನವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>