ಬೆಳಗಾವಿ: ವಿಷಪೂರಿತ ಆಹಾರ ಸೇವಿಸಿ ಕುರಿಗಳು ಸಾವಿಗೀಡಾಗಿ ನಷ್ಟ ಅನುಭವಿಸಿದ ಕುರಿಗಾಹಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ತಮ್ಮ ಲಕ್ಷ್ಮಿ ತಾಯಿ ಪ್ರತಿಷ್ಠಾನದಿಂದ ಆರ್ಥಿಕ ನೆರವು ನೀಡಿದರು.
ಸುಳಗಾದ ಪರುಶರಾಮ ಭೀಮಾ ಉಚಗಾಂವಕರ ಹಾಗೂ ಯಲ್ಲಪ್ಪ ರಾಮಾ ನರೋಟಿ ಅವರಿಗೆ ಸೇರಿದ 15 ಹದಿನೈದು ಕುರಿಗಳು ಆಕಸ್ಮಿಕವಾಗಿ ವಿಷಪೂರಿತ ಸಸ್ಯಗಳನ್ನು ತಿಂದು ಸಾವಿಗೀಡಾಗಿದ್ದವು. ಸುದ್ದಿ ತಿಳಿದ ತಕ್ಷಣ ಅವರ ಮನೆಗಳಿಗೆ ತೆರಳಿದ ಶಾಸಕಿ, ಧನ ಸಹಾಯ ಮಾಡಿ ಧೈರ್ಯವನ್ನು ತುಂಬಿದರು.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.